ಭಾಲ್ಕಿಯಲ್ಲಿ ಹಳೆ ಬಸ್ ನಿಲ್ದಾಣ ಕುಸಿತ : 6 ಸಾವು

ಅವಶೇಷಗಳಡಿ ಸಿಲುಕಿರುವವರಲ್ಲಿ ಶಾಲಾ ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ. ಭಾಲ್ಕಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ತುಂಬಾ ಹಳೆಯ ನಿಲ್ದಾಣವಾಗಿತ್ತು. ಇತ್ತೀಚೆಗೆ ನೂತನ ಬಸ್ ನಿಲ್ದಾಣ ಕಟ್ಟಡ ಕಾಮಗಾರಿಯೂ ನಡೆದಿದೆ. ಬಸ್ ನಿಲ್ದಾಣದೊಳಗೆ 30 ರಿಂದ 40 ಮಂದಿ ಇದ್ದರು ಎಂದು ತಿಳಿದು ಬಂದಿದೆ. ಈಗಾಗಲೇ ಆರು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಅಗತ್ಯ ಸಲಕರಣೆ ಮತ್ತು ಸಿಬ್ಬಂದಿಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ಸಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹರ್ಷಾ ಗುಪ್ತಾ ತಿಳಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಜನರ ದಂಡು ಹರಿದು ಬರತೊಡಗಿದೆ. ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ರಾಜ್ಯದ ತೀರಾ ಹಿಂದುಳಿದ ಜಿಲ್ಲೆ ಎಂಬ ಖ್ಯಾತಿ ಒಳಗಾಗಿರುವ ಬೀದರ್ ಜಿಲ್ಲೆ ಮೂಲಭೂತ ಸೌಕರ್ಯಗಳಿಂದ ಇಂದಿಗೂ ವಂಚಿತವಾಗಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಮಾಯಕರು ಪ್ರಾಣ ಕಳೆದುಕೊಂಡಂತಾಗಿದೆ. ಸ್ಥಳದಲ್ಲಿ ವೈದ್ಯರ ತಂಡ ಮುಕ್ಕಾಂ ಹೂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications