ಭಾಲ್ಕಿ : ಮೃತರ ಕುಟುಂಬಕ್ಕೆ ಪರಿಹಾರ

ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಶೋಕ್, ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದರು. ಸುಮಾರು 30-40 ವರ್ಷಗಳಷ್ಟು ಹಳೆಯದಾದ ಬಸ್ ನಿಲ್ದಾಣ ಅದಾಗಿದ್ದು, ಅದನ್ನು ಒಡೆದು ಹಾಕಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಆದರೆ, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಆದರೆ, ಭಾಲ್ಕಿ ಬಸ್ ನಿಲ್ದಾಣ ಹಳೆಯದಾಗಿದ್ದರಿಂದ ಅದರ ಪಕ್ಕದಲ್ಲಿ ಬಸ್ ನಿಲ್ದಾಣದ ಮಾದರಿಯಲ್ಲಿ ಶೆಡ್ ನಿರ್ಮಿಸಲಾಗಿತ್ತು. ಆದರೆ, ಜನರು ಹಳೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈಗಾಗಲೇ ಆರು ಮಂದಿ ಸಾವನ್ನಪ್ಪಿರುವುದು ಖಚಿತವಾಗಿದೆ. ಕಾರ್ಯಚರಣೆ ಇನ್ನೂ ಮುಂದುವರೆದಿದೆ. ಸುಮಾರು 28 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ ಪರಿಹಾರ ಮತ್ತು ಗಾಯಗೊಂಡವರ ಚಿಕಿತ್ಸೆಯ ಅಷ್ಟೂ ಖರ್ಚನ್ನು ಸಾರಿಗೆ ಇಲಾಖೆ ಭರಿಸಲಿದೆ. ಮತ್ತು 20 ಸಾವಿರ ರುಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಅಶೋಕ್ ವಿವರಿಸಿದರು. ಬೀದರ್ ಜಿಲ್ಲಾಧಿಕಾರಿ ಹರ್ಷಾ ಗುಪ್ತಾ, ಉಸ್ತುವಾರಿ ಸಚಿವ ರೇವೂ ನಾಯಕ್ ಬೆಳಮಗಿ, ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಸ್ಥಳದಲ್ಲಿದ್ದಾರೆ.
(ದಟ್ಟ್ ಕನ್ನಡ ವಾರ್ತೆ)












Click it and Unblock the Notifications