ಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು

ಕಳೆದೆರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನವೇ ಸುರಿಯಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ ವಿದ್ಯುತ್ ಸ್ಪರ್ಶದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪಾದಚಾರಿಗಳು, ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದಾಗಿ ಯಮಯಾತನೆ ಅನುಭವಿಸುವಂತಾಯಿತು. ಹಿಂಗಾರು ಮಳೆ ಇನ್ನೂ ಎರಡು ಮೂರು ದಿನಗಳ ಕಾಲ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಧ್ಯಾನ್ಹ ಸುಮಾರು 1 ಗಂಟೆಗೆ ಆಗಮಿಸಿದ ವರ್ಷಧಾರೆ 2.30ರವರೆಗೆ ಸತತವಾಗಿ ಸುರಿಯಿತು. ಜೆಸಿ ನಗರದ ನಿವಾಸಿ ವ್ಯಾಪಾರಿಯಾಗಿರುವ ದಿನೇಶ್ ಕುಮಾರ್ ಅವರು ಕೆಲಸದ ಮೇಲೆ ಕಲಾಸಿಪಾಳ್ಯಕ್ಕೆ ಬಂದಿದ್ದರು. ಭಾರಿ ಮಳೆಯಿಂದ ಕಲಾಸಿಪಾಳ್ಯದ ಬಸ್ ನಿಲ್ದಾಣದ ಬಳಿ ಮರ ಉರುಳಿಬಿದ್ದಿತು. ಮರ ತಂತಿಯ ಮೇಲೆ ಬಿದ್ದಿದ್ದು, ಬಸ್ ಗಾಗಿ ಕಾಯುತ್ತಿದ್ದ ದಿನೇಶ್ ಕುಮಾರ್ ಅವರ ಮೇಲೆ ತಂತಿ ಬಿದ್ದು ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದರು.
ಇನ್ನೊಂದು ಘಟನೆಯಲ್ಲಿ ಮಡಿವಾಳದ ಲಕ್ಷ್ಮಣರಾವ್ ನಗರದಲ್ಲಿ ಗಾರೆ ಕೆಲಸಗಾರ ಆನಂದ ಮೆಸ್ತ್ರೀ ಎಂಬುವವರು ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿದ್ಯುತ್ ಲೈಟಿನ ಅಲಂಕಾರ ಮಾಡಲಾಗಿತ್ತು. ಆದರೆ, ವಿದ್ಯುತ್ ಅಲಂಕಾರವನ್ನು ಸಂಪೂರ್ಣವಾಗಿ ತೆಗೆದು ಹಾಕಿರಲಿಲ್ಲ. ಅಂಗಡಿಗೆ ತೆರಳುತ್ತಿದ್ದ ಆನಂದ್ ಮೇಸ್ತ್ರೀ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಮೇಲೆ ಕಾಲಿಟ್ಟಿದ್ದರಿಂದ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಉಳಿದಂತೆ ಬಸವೇಶ್ವರ ನಗರದಲ್ಲಿ ಮರ ವ್ಯಕ್ತಿಯೊಬ್ಬನ ಮೇಲೆ ಉರುಳಿ ಬಿದ್ದಿದ್ದರಿಂದ ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿವಾಳ ಸಿಲ್ಕ್ ಬೋರ್ಡ್ ಜಂಕ್ಷನ್, ಡಬಲ್ ರಸ್ತೆ, ಲಾಲ್ ಬಾಗ್ ರಸ್ತೆ, ಕಾರ್ಪೋರೇಷನ್ ವೃತ್ತ, ಈಜೀಪುರ, ಹೊಸೂರು ರಸ್ತೆ, ಮೈಸೂರು ರಸ್ತೆಯ ಅನೇಕ ಪ್ರದೇಶಗಳು, ಚಾಮರಾಜಪೇಟೆಯ ತಗ್ಗು ಪ್ರದೇಶಗಳು, ಗಾರೆ ಪಾಳ್ಯ, ಆನೆ ಪಾಳ್ಯ ಸೇರಿದಂತೆ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನೀರು ಮನೆಯೊಳಗೆ ನುಗ್ಗಿ ಹಾವಳಿ ಎಬ್ಬಿಸಿದೆ.
ಆಪರೇಷನ್ ವಿಜಯ್ ಅಂತ್ಯ
ಕಳೆದೆರಡು ದಿನಗಳ ಹಿಂದೆ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ವಿಜಯ್ ಹುಡುಕಾಟ ಕಾರ್ಯವನ್ನು ಬಿಬಿಎಂಪಿ ಸ್ಥಗಿತಗೊಳಿಸಿದೆ. ವಿಜಯ್ ಹುಡುಕಾಟಕ್ಕೆ ಬಿಬಿಎಂಪಿ ಸಾಕಷ್ಟು ಪ್ರಯತ್ನ ನಡೆಸಿತು. ನಗರದ ಮಡಿವಾಳ ಕೆರೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಜೊತೆಗೆ ಇಂದು ಬೆಂಗಳೂರಿನಲ್ಲಿ ಭಾರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ವಿಜಯ್ ಕಾರ್ಯಾಚರಣೆಯನ್ನು ಕೈಬಿಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಅಧಿಕಾರಿ ಶಿವಬಸಯ್ಯ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications