ಬೆಂಗಳೂರು : ವರುಣನ ಆರ್ಭಟಕ್ಕೆ ಇಬ್ಬರು ಸಾವು

ಕಳೆದೆರಡು ದಿನಗಳಿಂದ ರಾತ್ರಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನವೇ ಸುರಿಯಲು ಪ್ರಾರಂಭಿಸಿತು. ಇದರ ಪರಿಣಾಮವಾಗಿ ವಿದ್ಯುತ್ ಸ್ಪರ್ಶದಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪಾದಚಾರಿಗಳು, ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದಾಗಿ ಯಮಯಾತನೆ ಅನುಭವಿಸುವಂತಾಯಿತು. ಹಿಂಗಾರು ಮಳೆ ಇನ್ನೂ ಎರಡು ಮೂರು ದಿನಗಳ ಕಾಲ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಧ್ಯಾನ್ಹ ಸುಮಾರು 1 ಗಂಟೆಗೆ ಆಗಮಿಸಿದ ವರ್ಷಧಾರೆ 2.30ರವರೆಗೆ ಸತತವಾಗಿ ಸುರಿಯಿತು. ಜೆಸಿ ನಗರದ ನಿವಾಸಿ ವ್ಯಾಪಾರಿಯಾಗಿರುವ ದಿನೇಶ್ ಕುಮಾರ್ ಅವರು ಕೆಲಸದ ಮೇಲೆ ಕಲಾಸಿಪಾಳ್ಯಕ್ಕೆ ಬಂದಿದ್ದರು. ಭಾರಿ ಮಳೆಯಿಂದ ಕಲಾಸಿಪಾಳ್ಯದ ಬಸ್ ನಿಲ್ದಾಣದ ಬಳಿ ಮರ ಉರುಳಿಬಿದ್ದಿತು. ಮರ ತಂತಿಯ ಮೇಲೆ ಬಿದ್ದಿದ್ದು, ಬಸ್ ಗಾಗಿ ಕಾಯುತ್ತಿದ್ದ ದಿನೇಶ್ ಕುಮಾರ್ ಅವರ ಮೇಲೆ ತಂತಿ ಬಿದ್ದು ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದರು.
ಇನ್ನೊಂದು ಘಟನೆಯಲ್ಲಿ ಮಡಿವಾಳದ ಲಕ್ಷ್ಮಣರಾವ್ ನಗರದಲ್ಲಿ ಗಾರೆ ಕೆಲಸಗಾರ ಆನಂದ ಮೆಸ್ತ್ರೀ ಎಂಬುವವರು ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿದ್ಯುತ್ ಲೈಟಿನ ಅಲಂಕಾರ ಮಾಡಲಾಗಿತ್ತು. ಆದರೆ, ವಿದ್ಯುತ್ ಅಲಂಕಾರವನ್ನು ಸಂಪೂರ್ಣವಾಗಿ ತೆಗೆದು ಹಾಕಿರಲಿಲ್ಲ. ಅಂಗಡಿಗೆ ತೆರಳುತ್ತಿದ್ದ ಆನಂದ್ ಮೇಸ್ತ್ರೀ ಆಕಸ್ಮಿಕವಾಗಿ ವಿದ್ಯುತ್ ತಂತಿಯ ಮೇಲೆ ಕಾಲಿಟ್ಟಿದ್ದರಿಂದ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.
ಉಳಿದಂತೆ ಬಸವೇಶ್ವರ ನಗರದಲ್ಲಿ ಮರ ವ್ಯಕ್ತಿಯೊಬ್ಬನ ಮೇಲೆ ಉರುಳಿ ಬಿದ್ದಿದ್ದರಿಂದ ಆತ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿವಾಳ ಸಿಲ್ಕ್ ಬೋರ್ಡ್ ಜಂಕ್ಷನ್, ಡಬಲ್ ರಸ್ತೆ, ಲಾಲ್ ಬಾಗ್ ರಸ್ತೆ, ಕಾರ್ಪೋರೇಷನ್ ವೃತ್ತ, ಈಜೀಪುರ, ಹೊಸೂರು ರಸ್ತೆ, ಮೈಸೂರು ರಸ್ತೆಯ ಅನೇಕ ಪ್ರದೇಶಗಳು, ಚಾಮರಾಜಪೇಟೆಯ ತಗ್ಗು ಪ್ರದೇಶಗಳು, ಗಾರೆ ಪಾಳ್ಯ, ಆನೆ ಪಾಳ್ಯ ಸೇರಿದಂತೆ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನೀರು ಮನೆಯೊಳಗೆ ನುಗ್ಗಿ ಹಾವಳಿ ಎಬ್ಬಿಸಿದೆ.
ಆಪರೇಷನ್ ವಿಜಯ್ ಅಂತ್ಯ
ಕಳೆದೆರಡು ದಿನಗಳ ಹಿಂದೆ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ವಿಜಯ್ ಹುಡುಕಾಟ ಕಾರ್ಯವನ್ನು ಬಿಬಿಎಂಪಿ ಸ್ಥಗಿತಗೊಳಿಸಿದೆ. ವಿಜಯ್ ಹುಡುಕಾಟಕ್ಕೆ ಬಿಬಿಎಂಪಿ ಸಾಕಷ್ಟು ಪ್ರಯತ್ನ ನಡೆಸಿತು. ನಗರದ ಮಡಿವಾಳ ಕೆರೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಜೊತೆಗೆ ಇಂದು ಬೆಂಗಳೂರಿನಲ್ಲಿ ಭಾರಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಆಪರೇಷನ್ ವಿಜಯ್ ಕಾರ್ಯಾಚರಣೆಯನ್ನು ಕೈಬಿಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಅಧಿಕಾರಿ ಶಿವಬಸಯ್ಯ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications