ಮಾಜಿ ಸಚಿವ ಡಿ.ಟಿ.ಜಯಕುಮಾರ್ ಇನ್ನಿಲ್ಲ

ಸುಗುಣ ಆಸ್ಪತ್ರೆಯಿಂದ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ. ಡಿ ಟಿ ಜಯಕುಮಾರ್ ಅವರ ಅಂತ್ಯಕ್ರಿಯೆ ಅವರ ತವರೂರಾದ ಚನ್ನಪಟ್ಟಣದ ದೇವರಹಳ್ಳಿಯಲ್ಲಿ ಭಾನುವಾರ ನೆರವೇರಲಿದೆ.
ಡಿ ಟಿ ಜಯಕುಮಾರ್ ಅವರು 1978ರಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯಕ್ಕೆ ಪಾದರ್ಪಣೆ ಮಾಡಿದ್ದರು. ಅವರು ನಂಜನಗೂಡು ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ನಂತರ ಅವರು ಕಾಂಗ್ರೆಸನ್ನು ತೊರೆದು ಬಿಎಸ್ ಪಿಗೆ ಸೇರ್ಪಡೆಗೊಂಡಿದ್ದರು. 2008ರಲ್ಲಿ ಬಿಎಸ್ ಪಿಯಿಂದ ಸ್ಪರ್ಧಿಸಿ ಸೋತಿದ್ದರು.
ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿದ ಜಯಕುಮಾರ್ ನಂತರ ಬಿಎಸ್ ಪಿ, ಜೆಡಿಎಸ್ ಪಕ್ಷಗಳಿಗೆ ಸೇರ್ಪಡೆಯಾಗಿದ್ದರು. ಜೆಡಿಎಸ್ ನಲ್ಲಿ ತಮಗೆ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಅವರು ಮನನೊಂದು ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿದ್ದರು. ತೋಟಗಾರಿಕೆ ಮತ್ತು ವಸತಿ ಸಚಿವರಾಗಿ ಹಾಗೂ ಮೂರು ಬಾರಿ ಶಾಸಕರಾಗಿ ಡಿ.ಜಿ.ಜಯಕುಮಾರ್ ಸೇವೆ ಸಲ್ಲಿಸಿದ್ದರು.
ದಿವಂಗತ ದೇವರಾಜ ಅರಸು ಅವರಿಂದ ಜಯಕುಮಾರ್ ಪ್ರಭಾವಿತರಾಗಿದ್ದರು. ದಲಿತ, ಹಿಂದುಳಿದ ಜನಾಂಗದ ಧ್ವನಿಯಾಗಿ ಜಯಕುಮಾರ್ ಮುಂಚೂಣಿಯಲ್ಲಿರುತ್ತಿದ್ದರು. ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಜ್ಜನ ರಾಜಕಾರಣಿಯನ್ನು ಕಳೆದುಕೊಳ್ಳಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications