ಕನ್ನಡದ ಹಬ್ಬ : ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
ಶಿವಮೊಗ್ಗ, ಸೆ. 21 : ಜನಹಿತ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ (ರಿ), ಪ್ರೆಸ್ ಪಬ್ಲಿಸಿಟಿ ಹಾಗೂ ವಿವಿಧ ಕನ್ನಡ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನವೆಂಬರ್ ತಿಂಗಳಿನಲ್ಲಿ ಕನ್ನಡದ ಹಬ್ಬ ವಿಶೇಷ ಕಾರ್ಯಕ್ರಮಗಳನ್ನು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಕನ್ನಡದ ಹಬ್ಬದ ವಿಶೇಷ ನೆನಪಿಗಾಗಿ ಸಾಹಿತ್ಯದ ವಿವಿಧ ಪ್ರಾಕಾರಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು.
ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಅತ್ಯುತ್ತಮ ಮಹಿಳಾ ಸಾಹಿತ್ಯ ಕೃತಿ, ಅತ್ಯುತ್ತಮ ಮಕ್ಕಳ ಸಾಹಿತ್ಯ ಕೃತಿ, ವಿಮರ್ಶಾ ಸಂಕಲನ, ಪ್ರವಾಸ ಕಥನ ಹಾಗೂ ಅತ್ಯುತ್ತಮ ಸಾಹಿತ್ಯೇತರ ಪುಸ್ತಕ ಪ್ರಶಸ್ತಿ ಸೇರಿದಂತೆ ಒಟ್ಟು 8 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುವುದು.
ಪ್ರತಿಯೊಂದು ಪ್ರಶಸ್ತಿಯೂ ರೂ.2000 ನಗದು, ಪ್ರಶಸ್ತಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ. ಪುಸ್ತಕಗಳನ್ನು ಕನ್ನಡದ ಖ್ಯಾತ ಲೇಖಕರು ಆಯ್ಕೆ ಮಾಡುವರು. ಪ್ರಶಸ್ತಿ ನೀಡುವ ವಿಚಾರದಲ್ಲಿ ಸಂಬಂಧಿತ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ನೀತಿ ನಿಯಮಾವಳಿಗಳು
* ಓರ್ವ ಲೇಖಕರು ಎಷ್ಟು ಕೃತಿಗಳನ್ನು ಬೇಕಾದರೂ ಪ್ರಶಸ್ತಿಗಾಗಿ ಕಳುಹಿಸಬಹುದು.
* ಪ್ರತಿಯೊಂದು ಪುಸ್ತಕದ ಪ್ರವೇಶ ಶುಲ್ಕ ರೂ.200 ಆಗಿರುತ್ತದೆ.
* ಪ್ರತಿಯೊಂದು ಪುಸ್ತಕದ 3 ಪ್ರತಿಗಳನ್ನು ಕಳುಹಿಸಬೇಕು.
* ಪುಸ್ತಕದ ಮೇಲೆ ಅಥವಾ ಒಳಗೆ ಏನನ್ನೂ ಬರೆದಿರಬಾರದು.* ಪ್ರತ್ಯೇಕವಾದ ಹಾಳೆಯೊಂದರಲ್ಲಿ ತಮ್ಮ ಸ್ವ-ವಿವರ, ವಿಳಾಸ ಇತ್ಯಾದಿ ಬರೆದಿರಬೇಕು.
* ಪ್ರವೇಶ ಶುಲ್ಕವನ್ನು ಎಂ.ಓ. ಅಥವಾ ಪ್ರೆಸ್ಪಬ್ಲಿಸಿಟಿ ಹೆಸರಿನಲ್ಲಿ ಡಿ.ಡಿ.ಮೂಲಕ ಪುಸ್ತಕಗಳೊಂದಿಗೆ ರವಾನಿಸಬೇಕು.
* ಕೊನೆ ದಿನಾಂಕ 15 ಅಕ್ಟೋಬರ್, 2009.
ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ : ಪ್ರೆಸ್ ಪಬ್ಲಿಸಿಟಿ, ಕನ್ನಡದ ಹಬ್ಬ-ಪುಸ್ತಕ ಪ್ರಶಸ್ತಿ ವಿಭಾಗ, 3ನೇ ತಿರುವು, ಗಾರ್ಡನ್ ಏರಿಯಾ, ನೆಹರೂ ರಸ್ತೆ, ಶಿವಮೊಗ್ಗ.
ದೂರವಾಣಿ: 97383 72464.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications