ಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ

ಇಂಥದೊಂದು ಕರುಣಾಜನಕ ಕಥೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳವಾರ ನಸುಕಿನಲ್ಲೇ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಓದಿದಾಗ, ಮನಸು ತಡೆಯಲಾಗಲಿಲ್ಲ, ನೋಟ ಹೊರಳಿಸಿ ಇತರ ರಾಜಕೀಯ ಸುದ್ದಿಗಳ ಕಡೆಗೆ ಕಣ್ಣು ಹಾಯಿಸಲಿಲ್ಲ. ಆ ಬಾಲೆಯ ವ್ಯಥೆಯ ಕಥೆ ಅವರ ಹೃದಯನ್ನು ಕಲಕಿತ್ತು. ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿಕೊಂಡು, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸ್ಪಂದಿಸುವ ವರದಿಗಳ ಕಡೆ ಆದ್ಯ ಗಮನ ನೀಡಲು ಸಲಹೆ ಮಾಡಿದರು. ಜನರ ಹಿತವನ್ನು ನೋಡಿಕೊಳ್ಳಲೆಂದೇ ನಾವಿರುವುದು ಎಂಬ ಕಿವಿಮಾತು ಹೇಳಿದರು.
ಅಷ್ಟರಲ್ಲಿ ಮುಖ್ಯಮಂತ್ರಿ ಸೂಚನೆಯಂತೆ, ಅವರ ಆಪ್ತ ಸಿಬ್ಬಂದಿ ವರ್ಗದವರು ಪತ್ರಿಕಾ ಕಚೇರಿ/ವರದಿಗಾರರಿಗೆ ದೂರವಾಣಿ ಕರೆ ಮಾಡಿ, ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಹುಡುಗಿ ಕೆಲಸ ಮಾಡುತ್ತಿದ್ದ ಮನೆಯ ವಿಳಾಸವನ್ನು ಪತ್ತೆ ಮಾಡಿ, ಆ ಮನೆಯವರನ್ನು ಕರೆಯಿಸಿಕೊಂಡಿದ್ದರು. ಪೋಷಕರಿಂದ ಎಲ್ಲಾ ವಿಷಯವನ್ನು ತಿಳಿದುಕೊಂಡ ಮುಖ್ಯಮಂತ್ರಿ, ಹುಡುಗಿಯ ಬುದ್ಧಿವಂತಿಕೆ-ಪ್ರತಿಭೆ-ಇಚ್ಛಾಶಕ್ತಿಗೆ ತಲೆದೂಗಿದರು.
ಬಾಲಕಿ ಮಂಜುಳಾ ವಿದ್ಯಾಭ್ಯಾಸ ಮುಂದುವರೆಸಲು ತಗಲುವ ಎಲ್ಲಾ ವೆಚ್ಚವನ್ನು ತಾವು ಸ್ವಂತವಾಗಿ ವಹಿಸಿಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದರು. ಆ ಸ್ಥಳದಲ್ಲೇ ತಮ್ಮ ಕಡೆಯಿಂದ ರೂ. 25,000 ರು.ಗಳನ್ನು ನೀಡಿದರು. ಬಾಲಕಿಗೆ ಮೂರು ದಿನಗಳಲ್ಲಿ ಹತ್ತಿರದ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಸೀಟು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಬಾಲಕಿ ಇಂಜಿನಿಯರಿಂಗ್ ಪದವಿ ಪಡೆಯುವವರೆಗೆ ಬೇಕಾದ ಎಲ್ಲಾ ಹಣಕಾಸಿನ ಅನುಕೂಲತೆಯನ್ನು ಖುದ್ದಾಗಿ ಭರಿಸುವುದಾಗಿ ಹೇಳಿದರು.
ಇತರ ಅರ್ಹ ಬಡವರೂ ಪ್ರಯತ್ನಿಸಬಹುದು
ಪ್ರತಿಭಾವಂತರೂ, ಕಡುಬಡವರೂ ಆಗಿದ್ದು, ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಎದುರಿಸುತ್ತಿರುವ ರಾಜ್ಯದ ಬಾಲಕ-ಬಾಲಕಿಯರು ಅಥವಾ ಅವರ ಪೋಷಕರು ಮುಖ್ಯಮಂತ್ರಿಯವರಿಗೆ ನೇರವಾಗಿ ಅರ್ಜಿ ಬರೆಯುವ ಮೂಲಕ ಆರ್ಥಿಕ ಸಹಾಯವನ್ನು ಕೋರಬಹುದು. ಅರ್ಹರು ವಿದ್ಯಾಭ್ಯಾಸ ಮುಂದುವರೆಸಲು ತಗಲುವ ವೆಚ್ಚವನ್ನು ಮುಖ್ಯಮಂತ್ರಿಯವರು ಸ್ವಂತ ಭರಿಸಲಿದ್ದಾರೆ; ಅಥವಾ ದಾನಿಗಳ ನೆರವು ದೊರಕುವ ವ್ಯವಸ್ಥೆಯನ್ನು ಮಾಡಲಿದ್ದಾರೆ. ಈ ಬಗ್ಗೆ ಶಿಫಾರಸು ಪತ್ರಗಳು ಬೇಕಿಲ್ಲ; ಮಧ್ಯವರ್ತಿಗಳೂ ಬೇಕಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications