ಮುಸುರೆ ತಿಕ್ಕುವ ಹುಡುಗಿಯ ಕಥೆಗೆ ಕಣ್ಣೀರಾದ ಸಿಎಂ

ಇಂಥದೊಂದು ಕರುಣಾಜನಕ ಕಥೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳವಾರ ನಸುಕಿನಲ್ಲೇ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಓದಿದಾಗ, ಮನಸು ತಡೆಯಲಾಗಲಿಲ್ಲ, ನೋಟ ಹೊರಳಿಸಿ ಇತರ ರಾಜಕೀಯ ಸುದ್ದಿಗಳ ಕಡೆಗೆ ಕಣ್ಣು ಹಾಯಿಸಲಿಲ್ಲ. ಆ ಬಾಲೆಯ ವ್ಯಥೆಯ ಕಥೆ ಅವರ ಹೃದಯನ್ನು ಕಲಕಿತ್ತು. ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಯಿಸಿಕೊಂಡು, ಜನಸಾಮಾನ್ಯರ ಕಷ್ಟ-ಸುಖಗಳಿಗೆ ಸ್ಪಂದಿಸುವ ವರದಿಗಳ ಕಡೆ ಆದ್ಯ ಗಮನ ನೀಡಲು ಸಲಹೆ ಮಾಡಿದರು. ಜನರ ಹಿತವನ್ನು ನೋಡಿಕೊಳ್ಳಲೆಂದೇ ನಾವಿರುವುದು ಎಂಬ ಕಿವಿಮಾತು ಹೇಳಿದರು.
ಅಷ್ಟರಲ್ಲಿ ಮುಖ್ಯಮಂತ್ರಿ ಸೂಚನೆಯಂತೆ, ಅವರ ಆಪ್ತ ಸಿಬ್ಬಂದಿ ವರ್ಗದವರು ಪತ್ರಿಕಾ ಕಚೇರಿ/ವರದಿಗಾರರಿಗೆ ದೂರವಾಣಿ ಕರೆ ಮಾಡಿ, ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಹುಡುಗಿ ಕೆಲಸ ಮಾಡುತ್ತಿದ್ದ ಮನೆಯ ವಿಳಾಸವನ್ನು ಪತ್ತೆ ಮಾಡಿ, ಆ ಮನೆಯವರನ್ನು ಕರೆಯಿಸಿಕೊಂಡಿದ್ದರು. ಪೋಷಕರಿಂದ ಎಲ್ಲಾ ವಿಷಯವನ್ನು ತಿಳಿದುಕೊಂಡ ಮುಖ್ಯಮಂತ್ರಿ, ಹುಡುಗಿಯ ಬುದ್ಧಿವಂತಿಕೆ-ಪ್ರತಿಭೆ-ಇಚ್ಛಾಶಕ್ತಿಗೆ ತಲೆದೂಗಿದರು.
ಬಾಲಕಿ ಮಂಜುಳಾ ವಿದ್ಯಾಭ್ಯಾಸ ಮುಂದುವರೆಸಲು ತಗಲುವ ಎಲ್ಲಾ ವೆಚ್ಚವನ್ನು ತಾವು ಸ್ವಂತವಾಗಿ ವಹಿಸಿಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಯವರು ನೀಡಿದರು. ಆ ಸ್ಥಳದಲ್ಲೇ ತಮ್ಮ ಕಡೆಯಿಂದ ರೂ. 25,000 ರು.ಗಳನ್ನು ನೀಡಿದರು. ಬಾಲಕಿಗೆ ಮೂರು ದಿನಗಳಲ್ಲಿ ಹತ್ತಿರದ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಸೀಟು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಬಾಲಕಿ ಇಂಜಿನಿಯರಿಂಗ್ ಪದವಿ ಪಡೆಯುವವರೆಗೆ ಬೇಕಾದ ಎಲ್ಲಾ ಹಣಕಾಸಿನ ಅನುಕೂಲತೆಯನ್ನು ಖುದ್ದಾಗಿ ಭರಿಸುವುದಾಗಿ ಹೇಳಿದರು.
ಇತರ ಅರ್ಹ ಬಡವರೂ ಪ್ರಯತ್ನಿಸಬಹುದು
ಪ್ರತಿಭಾವಂತರೂ, ಕಡುಬಡವರೂ ಆಗಿದ್ದು, ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಎದುರಿಸುತ್ತಿರುವ ರಾಜ್ಯದ ಬಾಲಕ-ಬಾಲಕಿಯರು ಅಥವಾ ಅವರ ಪೋಷಕರು ಮುಖ್ಯಮಂತ್ರಿಯವರಿಗೆ ನೇರವಾಗಿ ಅರ್ಜಿ ಬರೆಯುವ ಮೂಲಕ ಆರ್ಥಿಕ ಸಹಾಯವನ್ನು ಕೋರಬಹುದು. ಅರ್ಹರು ವಿದ್ಯಾಭ್ಯಾಸ ಮುಂದುವರೆಸಲು ತಗಲುವ ವೆಚ್ಚವನ್ನು ಮುಖ್ಯಮಂತ್ರಿಯವರು ಸ್ವಂತ ಭರಿಸಲಿದ್ದಾರೆ; ಅಥವಾ ದಾನಿಗಳ ನೆರವು ದೊರಕುವ ವ್ಯವಸ್ಥೆಯನ್ನು ಮಾಡಲಿದ್ದಾರೆ. ಈ ಬಗ್ಗೆ ಶಿಫಾರಸು ಪತ್ರಗಳು ಬೇಕಿಲ್ಲ; ಮಧ್ಯವರ್ತಿಗಳೂ ಬೇಕಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications