ನೇತಾಜಿ ಕುಟುಂಬ ಆಸ್ಟ್ರಿಯಾದಲ್ಲಿ ವಾಸ

ಸುದ್ದಿಗಾರರಿಗೆ ಮಂಗಳವಾರ ಮಾಹಿತಿ ನೀಡಿದ ಅವರು, ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರತ್ಯೇಕ ಸೈನ್ಯ ಕಟ್ಟಿ ಹೋರಾಡಿದ ಬೋಸ್ ಅವರ ಕುಟುಂಬ ಎಲ್ಲಿದೆ, ಏನಾಗಿದೆ ಎಂಬ ಕುತೂಹಲ ದಿಂದ 3 ವರ್ಷದಿಂದ ಈಚೆಗೆ ಮಾಹಿತಿ ಕಲೆ ಹಾಕುವ ಪ್ರಯತ್ನ ನಡೆಸಿದ್ದೇನೆ. ಪತ್ತೆದಾರಿ ರೀತಿಯಲ್ಲಿ ಕಾರ್ಯ ಮಾಡಿದ ನಂತರ ಇದೀಗ ಕುಟುಂಬದ ಸಂಪರ್ಕ ಸಾಧ್ಯವಾಗಿದೆ ಎಂದರು. ಪತ್ತೆ ಹಚ್ಚಿದ್ದು ಹೀಗೆ ನೇತಾಜಿ ಅವರ ಮರಣದ ಸತ್ಯಾಸತ್ಯತೆಯ ತನಿಖೆ ನಡೆ ಸಲು ಕೇಂದ್ರದಿಂದ ನೇಮಕ ಗೊಂಡಿದ್ದ ಮುಖರ್ಜಿ ಆಯೋಗ ವರದಿಯ ಮೂರು ಸಂಪುಟಗಳಲ್ಲಿಯೂ ನೇತಾಜಿ ಕುಟುಂಬ ದವರ ಬಗ್ಗೆ ಉಲ್ಲೇಖವಿಲ್ಲ.
ವಿದೇಶಾಂಗ ಮತ್ತು ಗೃಹ ಸಚಿವಾಲಯದಲ್ಲಿಯೂ ಸ್ಪಷ್ಟ ಮಾಹಿತಿ ಇರಲಿಲ್ಲ. ನಂತರ ಈ ಬಗ್ಗೆ ಹಿರಿಯರ ಜತೆ ಚರ್ಚಿಸಿ ಅವರ ಕುಟುಂಬದವರು ಎಲ್ಲಿದ್ದಾರೆ ಎಂಬ ಬಗ್ಗೆ ಹುಡುಕಾಟ ಪ್ರಾರಂಭಿಸಿದೆ. ನೇತಾಜಿ ಅವರು ಜರ್ಮನಿ, ಆಸ್ಟ್ರಿಯಾ ಜತೆ ನಿಕಟ ಸಂಪರ್ಕ ಹೊಂದಿದ್ದರು. 1936-37ರಲ್ಲಿ ಆಸ್ಟ್ರಿಯಾದಲ್ಲಿ ನೆಲೆಸಿದ್ದ ಬಗ್ಗೆ ಮಾಹಿತಿಯಿದೆ. ಕೆಲ ದಿನಗಳ ಹಿಂದೆ ವಿದೇಶ ಪ್ರವಾಸದಲ್ಲಿದ್ದಾಗ ಆಸ್ಟ್ರಿಯಾದಲ್ಲಿ ರಾಯಭಾರಿ ಕಚೇರಿಯಲ್ಲಿ ವಿಚಾರಿಸಿದೆ. ಅಲ್ಲಿನ ಭಾರತೀಯ ಕುಟುಂಬಗಳ ಯಾದಿಯಲ್ಲಿ ಬೋಸ್ ಕುಟುಂಬದ ಮಾಹಿತಿ ಇರಲಿಲ್ಲ. ನಂತರ ಅಲ್ಲಿ ಯೋಗ ತರಬೇತಿ ನೀಡುತ್ತಿರುವ ಸ್ವಾಮೀಜಿಯೊಬ್ಬರನ್ನು ಸಂಪರ್ಕಿಸಿದಾಗ, ಈ ಹಿಂದೆ ಇಂಡಿಯನ್ ನ್ಯಾಷನಲ್ ಆರ್ಮಿ ಪ್ರಧಾನ ಕಚೇರಿ ಸಹಾಯಕರಾಗಿದ್ದ ಕೆ.ಕೆ.ಶಾಂಡಿಲ್ಯ(86) ಅವರ ಭೇಟಿ ಸಾಧ್ಯವಾಯಿತು.
ಕೌಶಲ್ ಎನ್ನುವವರ ಮೂಲಕ ಆಸ್ಟ್ರಿಯಾದಲ್ಲಿರುವ ಬೋಸ್ ಹೌಸ್ ಮತ್ತು ಅಲ್ಲಿ ನೇತಾಜಿಯವರ ಮಗಳು ಅನಿತಾ ಬೋಸ್ ವಾಸಿಸುತ್ತಿದ್ದುದು ತಿಳಿದು ಬಂತು. ಅಲ್ಲದೇ, ಅನಿತಾ ಬೋಸ್ ಅವರ ಮಗಳು ಮಾಯಾ ಫೋಫ್ ಜರ್ಮನಿ ಯಲ್ಲಿ ಇದ್ದಾರೆಂದು ಗೊತ್ತಾಯಿತು. ಇಷ್ಟೆಲ್ಲ ಮಾಹಿತಿ ಲಭ್ಯವಾಗುವ ವೇಳೆಗೆ ಆಸ್ಟ್ರಿಯಾದಿಂದ ಮರಳುವ ಸಮಯವಾಗಿದ್ದರಿಂದ ಅವರನ್ನೆಲ್ಲ ಮುಖತಃ ಭೇಟಿಯಾಗಲು ಸಾಧ್ಯವಾಗಲಿಲ್ಲ. ಜನವರಿ 23ರಂದು ನೇತಾಜಿಯವರ ಜನ್ಮದಿನಾಚರಣೆ ಸಮಾರಂಭಕ್ಕೆ ಅನಿತಾ ಮತ್ತು ಮಾಯಾ ಅವರನ್ನು ಆಹ್ವಾನಿಸಿ ದೊಡ್ಡ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಅವರನ್ನು ಸಂಪರ್ಕಿಸಿದಾಗ, ಭಾರತದಲ್ಲಿ ಈವರೆಗೆ ತಮ್ಮನ್ನು ಗೌರವ ದಿಂದ ನಡೆಸಿಕೊಂಡಿಲ್ಲ ಎಂದಿದ್ದು ಕಾರ್ಯಕ್ರಮಕ್ಕೆ ಬರುವುದಕ್ಕೆ ಒಪ್ಪಿದ್ದಾರೆ ಎಂದು ಹೇಳಿದರು.
(ಸ್ನೇಹ ಸೇತು: ವಿಜಯಕರ್ನಾಟಕ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications