ಶಾಸ್ತ್ರೀಯ ಸ್ಥಾನಮಾನ : ರಿಟ್ ಅರ್ಜಿ ಶೀಘ್ರ ಹಿಂದಕ್ಕೆ

Ashok Haranalli
ಬೆಂಗಳೂರು, ಸೆ. 25 : ತಿರುವಳ್ಳುವರ್ ಪ್ರತಿಮೆ ಬೆಂಗಳೂರಿನಲ್ಲಿ ತ್ರಿಪದಿಗಳ ಬ್ರಹ್ಮ ಸರ್ವಜ್ಞನ ಪ್ರತಿಮೆ ಚೆನ್ನೈನಲ್ಲಿ ಸ್ಥಾಪನೆಯಾದ ನಂತರ ಉಭಯ ರಾಜ್ಯಗಳ ನಡುವಿನ ಸಂಬಂಧ ಸುಧಾರಿಸಲಿದೆ ಎಂಬ ಸರಕಾರಗಳ ನಂಬಿಕೆಗೆ ಪೂರಕವಾಗುವಂತ ವಾತಾವರಣ ನಿರ್ಮಾಣವಾಗತೊಡಗಿವೆ. ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡುವುದನ್ನು ವಿರೋಧಿಸಿ ತಮಿಳುನಾಡಿನ ಹಿರಿಯ ನ್ಯಾಯವಾದಿ ಆರ್ ಗಾಂಧಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಾಪಸ್ಸು ಪಡೆಯುವುದು ಬಹುತೇಕ ಖಚಿತವಾಗಿದೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಸರಕಾರದ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ತಮಿಳುನಾಡಿನ ಅಡ್ವೋಕೇಟ್ ಜನರಲ್ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಕೂಡಲೇ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುವ ಭರವಸೆ ಅಲ್ಲಿನ ಸರಕಾರ ನೀಡಿದೆ ಎಂದರು. ಕನ್ನಡ ಶಾಸ್ತ್ರೀಯ ಸ್ಥಾನಮಾನ ನೀಡಲು ಮುಂದಾಗಿರುವ ಕೇಂದ್ರ ಸರಕಾರದ ವಿರುದ್ಧ ತಮಿಳರು ಅಡ್ಡಪಡಿಸುತ್ತಿದ್ದಾರೆ ಎಂಬ ಅಂಶದಿಂದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿದೆ.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ವಿರೋಧಿಸಿ ವಕೀಲ ಆರ್ ಗಾಂಧಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುವಂತೆ ಮನವೊಲಿಸಲಾಗುವುದು ಎಂಜು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಈ ಹಿಂದೆ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+