ಮುಂದುವರಿದ ವರುಣನ ಆರ್ಭಟ; 5 ಸಾವು

ವರುಣನ ಆರ್ಭಟಕ್ಕೆ ಚಿತ್ರದುರ್ಗ ಜಿಲ್ಲೆಯಲ್ಲಿ ಮೂವರು ಮತ್ತು ಕೋಲಾರ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಬುಧವಾರ ರಾತ್ರಿ ಬೆಂಗಳೂರು ನಗರದಲ್ಲಿ ದಾಖಲೆ 69 ಮಿ.ಮೀ ಮಳೆಯಾಗಿದೆ. ನಾಗರಿಕರ ಪ್ರಾಣ ಕಾಪಾಡಲು ಅಗ್ನಿಶಾಮಕ ದಳದವರು ಹರಸಾಹಸಪಡುತ್ತಿದ್ದಾರೆ. ತಡರಾತ್ರಿ ಇಷ್ಟೆಲ್ಲಾ ಘಟನೆ ನಡೆದರೂ ಯಾವುದೇ ಅನಾಹುತಕ್ಕೆ ಅವಕಾಶ ಕಲ್ಪಿಸಿಕೊಡದೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಚುರುಕಿನಿಂದ ಕೆಲಸ ನಡೆಸುತ್ತಿದ್ದಾರೆ. ಜಲಾವೃತಗೊಂಡ ಪ್ರದೇಶದಲ್ಲಿ ನಾಗರಿಕರ ಜೀವ ಮತ್ತು ಆಸ್ತಿ ಕಾಪಾಡಿದ ಅಗ್ನಿಶಾಮಕ ದಳದ ಅಧಿಕಾರಿಗಳು ಸೇರಿದಂತೆ 46 ಸಿಬ್ಬಂದಿಗಳು ನಾಗರಿಕರ ಪಾಲಿಗೆ ಹೀರೋಗಳಾಗಿದ್ದಾರೆ.
ಈ ಮಧ್ಯೆ ಮಳೆ ತೊಂದರೆ ಬಗ್ಗೆ ಸಾರ್ವಜನಿಕರು ನೀಡುವ ದೂರು ಸ್ವೀಕರಿಸಲು ಸ್ವತಃ ಬಿಬಿಎಂಪಿ ಕಛೇರಿಯಲ್ಲಿ ಕುಳಿತ ಸಾರಿಗೆ ಸಚಿವ ಅಶೋಕ್ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ. ಗುರುವಾರ (ಸೆ 24) ಸಂಜೆ 5.30ರ ಸುಮಾರಿಗೆ ಬಿಬಿಎಂಪಿ ಕಚೇರಿಗೆ ಬಂದ ಸಚಿವರು ತಡ ರಾತ್ರಿಯವರೆಗೆ ಇದ್ದು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತಿದ್ದರು.
ಬೆಂಗಳೂರು ನಗರದಲ್ಲಿನ ಯಶವಂತಪುರ ಆರ್ ಎಂ ಸಿ ಯಾರ್ಡ್ ಗೋದಾಮುಗಳು ಹೆಚ್ಚು ಕಮ್ಮಿ ಮುಳುಗಿಹೋಗಿದೆ. ರಾಜಾಜಿನಗರ, ವಿಜಯನಗರ, ನಂದಿನಿ ಲೇಔಟ್, ಜೆಸಿ ನಗರ, ಮೆಜಿಸ್ಟಿಕ್, ಕುಮಾರಪಾರ್ಕ್, ನಾಗರಬಾವಿ ಮತ್ತಿತರ ಬಡಾವಣೆಗಳಲ್ಲಿ ವರುಣನ ಆರ್ಭಟ ಜೋರಾಗಿತ್ತು. ಮೈಸೂರು ರಸ್ತೆ, ಹೊಸೂರು ರಸ್ತೆ, ಮಹಾತ್ಮಾ ಗಾಂಧಿ ರಸ್ತೆ, ನೃಪತುಂಗ ರಸ್ತೆ, ಜೆ ಸಿ ರಸ್ತೆ, ಕಲಾಸಿಪಾಳ್ಯ, ಶಿವಾಜಿನಗರ,ಕಾರ್ಪೋರೇಶನ್ ವೃತ್ತ, ಮೆಜೆಸ್ಟಿಕ್ ಮುಂತಾದ ಪ್ರದೇಶಗಳಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications