ಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ

ವಿಧಾನಸೌಧಕ್ಕೆ ದಿಗ್ಬಂಧನ ಹಾಕುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ಸರಕಾರ ಗಂಭೀರ ಪರಿಗಣಿಸಿ ಕಂಡಕಂಡಲ್ಲಿ ಕಾಂಗ್ರೆಸ್ ನಾಯಕರನ್ನು ಬಂಧಿಸಿತು. ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಶಾಸಕ ಪ್ರಭಾಕರರೆಡ್ಡಿ ಅವರನ್ನು ಪೊಲೀಸರು ಎತ್ತಾಕಿಕೊಂಡು ಹೋಗಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಬಂಧಿಸಲಾಗಿರುವ ಕಾಂಗ್ರೆಸ್ ನಾಯಕರನ್ನು ಆಡುಗೋಡಿನ ಜೈಲಿನ ನಾಯಿ ಸೆಡ್ ನಲ್ಲಿ ಇರಿಸಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.
ಜೈಲಿನಲ್ಲಿ ಸರಕಾರದ ವಿರುದ್ಧ ಮತ್ತಷ್ಟು ಗರಂ ಆದ ಸಿದ್ಧರಾಮಯ್ಯ, ಸರಕಾರಕ್ಕೆ ನಾಚಿಕೆ ಅನ್ನುವುದೇ ಇಲ್ಲ. ನಾವು ಏನು ತಪ್ಪು ಮಾಡಿದ್ದೇವೆ ಎಂದು ಈ ಶಿಕ್ಷೆ? ಶಾಸಕರು, ಮಾಜಿ ಸಚಿವರುಗಳನ್ನು ನಾಯಿ ಶೆಡ್ ನಲ್ಲಿ ಕೂಡಿಹಾಕಿ ಮುಖ್ಯಮಂತ್ರಿ ಯಡಿಯೂರಪ್ಪ ಮೋಜು ನೋಡುತ್ತಿದ್ದಾರೆ. ಸರಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಇಲ್ಲಿಗೆ ಮುಗಿಯುವುದಿಲ್ಲ. ಇಂದಿನಿಂದ ಆರಂಭವಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುತ್ತೇವೆ. ಜನರ ಬಳಿ ಹೋಗುತ್ತೇವೆ. ಈ ಲಜ್ಜೆಗೆಟ್ಟ ಸರಕಾರಕ್ಕೆ ಜನರಿಂದಲೇ ಕಪಾಳಮೋಕ್ಷ ಮಾಡಿಸುತ್ತೇವೆ ಸಿದ್ದರಾಮಯ್ಯ ಕಿಡಿಕಿಡಿಯಾದರು.
ತಪ್ಪೆ ಮಾಡದ ನಮ್ಮನ್ನು ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನುಷವಾಗಿ ವರ್ತಿಸಿರುವ ಯಡಿಯೂರಪ್ಪ ಅವರ ಸರಕಾರದ ವಿರುದ್ಧ ಕಾನೂನು ಸಮರ ನಡೆಸುತ್ತೇವೆ. ಈ ಬಗ್ಗೆ ಸ್ವೀಕರ್ ಅವರಿಗೆ ದೂರು ನೀಡುತ್ತೇವೆ. ಈ ಅಂಶಗಳನ್ನು ಕ್ರೋಢೀಕರಿಸಿ ನ್ಯಾಯಾಲಯ ಮೊರೆ ಹೋಗುವುದು ಖಚಿತ ಎಂದು ಸಿದ್ಧರಾಮಯ್ಯ ಎಚ್ಚರಿಕೆ ನೀಡಿದರು. ಪೊಲೀಸರ ಕ್ರಮವನ್ನು ವಿರೋಧಿಸಿ ಆಹಾರ ಸ್ವೀಕರಿಸುವುದನ್ನು ಕಾಂಗ್ರೆಸ್ ಕಾರ್ಯಕರ್ತರು ನಿರಾಕರಿಸಿದರು. ಕೂಡಲೇ ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಬರಬೇಕೆಂದು ಪಟ್ಟುಹಿಡಿದರು.
(ದಟ್ಸ್ ಕನ್ನಡ ವಾರ್ತೆ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications