ಸುತ್ತೂರಿನಲ್ಲಿ ಸಚಿವರಿಗೆ ಪ್ರೈವೇಟ್ ಟ್ಯೂಷನ್ ಆರಂಭ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಅನಂತಕುಮಾರ್, ವಕ್ತಾರ ಧನಂಜಯ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದಗೌಡ ಕಾರ್ಯಕ್ರಮದಲ್ಲಿ ಒಂದೊಂದು ವಿಷಯ ಕುರಿತಂತೆ ಉಪನ್ಯಾಸ ನೀಡಲಿದ್ದಾರೆ. ಆದರೆ ಧಾರ್ಮಿಕ ಕೇಂದ್ರ ಸುತ್ತೂರು ಮಠದಲ್ಲಿ ಬಿಜೆಪಿ ಸರಕಾರ ಚಿಂತನೆ ಮಂಥನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಾಂಗ್ರೆಸ್ ಟೀಕೆ
ಅನನುಭವಿಗಳ ಕೈಗೆ ರಾಜ್ಯದ ಅಧಿಕಾರ ಕೊಟ್ಟಿದ್ದು ದೊಡ್ಡ ದುರಂತ ಎಂದು ಕಾಂಗ್ರೆಸ್ ಟೀಕಿಸಿದೆ. ಕಳೆದ ಮೂರು ವರ್ಷಗಳಿಂದ ಅನುಭವವಿಲ್ಲದೆ ರಾಜ್ಯದ ಆಡಳಿತ ನಡೆಸಿದ ಸರಕಾರ ರಾಜ್ಯವನ್ನು ಕತ್ತಲೆಗೆ ತಳ್ಳಿದೆ. ಕಳೆದ ಒಂದೂವರೆ ವರ್ಷದಿಂದ ರಾಜ್ಯದ ಅಭಿವೃದ್ಧಿ ಹೇಗಾಗಿದೆ ಎಂಬುದಕ್ಕೆ ಇದರಿಂದ ಗೊತ್ತಾಗುತ್ತದೆ. ಇಂತವರ ಕೈಗೆ ರಾಜ್ಯದ ಅಧಿಕಾರವನ್ನು ಕೊಟ್ಟಿದ್ದು ದೊಡ್ಡ ದುರಂತ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಟೀಕಿಸಿದ್ದಾರೆ.
ಬಿಜೆಪಿ ಸರಕಾರ ರಾಜ್ಯಕ್ಕೆ ಮಾಡಿದ್ದೇನು ? ಒಬ್ಬ ಬಡವನಿಗೆ ನಿವೇಶನವಿಲ್ಲ. ಸೂರು ಕಲ್ಪಿಸಿಲ್ಲ. ಪಡಿತರ ಚೀಟಿ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪ್ರತಿಪಕ್ಷದವರು ನಡೆಸುವ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದೆ. ವಿಧಾನಸೌಧ ದಿಗ್ಬಂಧನ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಎಂದು ಅವರು ಕಿಡಿಕಾರಿದರು.
ಕುಮಾರಸ್ವಾಮಿ ಲೇವಡಿ
ಸುತ್ತೂರು ಮಠದಲ್ಲಿ ಬಿಜೆಪಿಯ ಚಿಂತನಾ ಸಭೆಯಲ್ಲಿ ತೀವ್ರವಾಗಿ ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೋಮುವಾದ ಪ್ರವಚನ ಮಾಡಲಿಕ್ಕೆ ಚಿಂತನೆ ಸಭೆಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ಗುಜರಾತ್ ನರಮೇಧ ನಡೆಸಿ ಕುಖ್ಯಾತಿ ಗಳಿಸಿರುವ ನರೇಂದ್ರ ಮೋದಿ ಅವರಿಂದ ಪ್ರವಚನ ಪಡೆಯುತ್ತಿರುವ ರಾಜ್ಯ ಸರಕಾರ ಎಂತಹ ಅಭಿವೃದ್ಧಿ ಕಾಣಲಿದೆ ಎನ್ನುವುದು ಅನುಮಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications