ಸುತ್ತೂರಿನಲ್ಲಿ ಸಚಿವರಿಗೆ ಪ್ರೈವೇಟ್ ಟ್ಯೂಷನ್ ಆರಂಭ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಅನಂತಕುಮಾರ್, ವಕ್ತಾರ ಧನಂಜಯ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಡಿವಿ ಸದಾನಂದಗೌಡ ಕಾರ್ಯಕ್ರಮದಲ್ಲಿ ಒಂದೊಂದು ವಿಷಯ ಕುರಿತಂತೆ ಉಪನ್ಯಾಸ ನೀಡಲಿದ್ದಾರೆ. ಆದರೆ ಧಾರ್ಮಿಕ ಕೇಂದ್ರ ಸುತ್ತೂರು ಮಠದಲ್ಲಿ ಬಿಜೆಪಿ ಸರಕಾರ ಚಿಂತನೆ ಮಂಥನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಕಾಂಗ್ರೆಸ್ ಟೀಕೆ
ಅನನುಭವಿಗಳ ಕೈಗೆ ರಾಜ್ಯದ ಅಧಿಕಾರ ಕೊಟ್ಟಿದ್ದು ದೊಡ್ಡ ದುರಂತ ಎಂದು ಕಾಂಗ್ರೆಸ್ ಟೀಕಿಸಿದೆ. ಕಳೆದ ಮೂರು ವರ್ಷಗಳಿಂದ ಅನುಭವವಿಲ್ಲದೆ ರಾಜ್ಯದ ಆಡಳಿತ ನಡೆಸಿದ ಸರಕಾರ ರಾಜ್ಯವನ್ನು ಕತ್ತಲೆಗೆ ತಳ್ಳಿದೆ. ಕಳೆದ ಒಂದೂವರೆ ವರ್ಷದಿಂದ ರಾಜ್ಯದ ಅಭಿವೃದ್ಧಿ ಹೇಗಾಗಿದೆ ಎಂಬುದಕ್ಕೆ ಇದರಿಂದ ಗೊತ್ತಾಗುತ್ತದೆ. ಇಂತವರ ಕೈಗೆ ರಾಜ್ಯದ ಅಧಿಕಾರವನ್ನು ಕೊಟ್ಟಿದ್ದು ದೊಡ್ಡ ದುರಂತ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಟೀಕಿಸಿದ್ದಾರೆ.
ಬಿಜೆಪಿ ಸರಕಾರ ರಾಜ್ಯಕ್ಕೆ ಮಾಡಿದ್ದೇನು ? ಒಬ್ಬ ಬಡವನಿಗೆ ನಿವೇಶನವಿಲ್ಲ. ಸೂರು ಕಲ್ಪಿಸಿಲ್ಲ. ಪಡಿತರ ಚೀಟಿ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪ್ರತಿಪಕ್ಷದವರು ನಡೆಸುವ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದೆ. ವಿಧಾನಸೌಧ ದಿಗ್ಬಂಧನ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಎಂದು ಅವರು ಕಿಡಿಕಾರಿದರು.
ಕುಮಾರಸ್ವಾಮಿ ಲೇವಡಿ
ಸುತ್ತೂರು ಮಠದಲ್ಲಿ ಬಿಜೆಪಿಯ ಚಿಂತನಾ ಸಭೆಯಲ್ಲಿ ತೀವ್ರವಾಗಿ ಲೇವಡಿ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೋಮುವಾದ ಪ್ರವಚನ ಮಾಡಲಿಕ್ಕೆ ಚಿಂತನೆ ಸಭೆಯನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ಗುಜರಾತ್ ನರಮೇಧ ನಡೆಸಿ ಕುಖ್ಯಾತಿ ಗಳಿಸಿರುವ ನರೇಂದ್ರ ಮೋದಿ ಅವರಿಂದ ಪ್ರವಚನ ಪಡೆಯುತ್ತಿರುವ ರಾಜ್ಯ ಸರಕಾರ ಎಂತಹ ಅಭಿವೃದ್ಧಿ ಕಾಣಲಿದೆ ಎನ್ನುವುದು ಅನುಮಾನ ಮತ್ತು ಆತಂಕಕ್ಕೆ ಕಾರಣವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications