ಚನ್ನಪಟ್ಟಣದಲಿ ಕಲಬೆರಕೆ ಮದಿರೆಯ ಹೊಳೆ!

ಇದು ಅಸಲಿ ಸತ್ಯ. ಬಡಕುಟುಂಬಗಳು ಸಾರಾಯಿಯಿಂದ ಅನುಭವಿಸುತ್ತಿದ್ದ ಕಷ್ಟಗಳನ್ನು ಹೋಗಲಾಡಿಸಲು ಸರ್ಕಾರ ಸಾರಾಯಿ ನಿಷೇಧ ಜಾರಿಗೆ ತಂದಿರುವುದು ಸಂತೋಷದ ವಿಚಾರವಾದರೂ, ಪಾನಪ್ರಿಯರು ಈಗ ಸಾರಾಯಿ ಬಿಟ್ಟು ಬಾಟಲಿ ಮೊರೆಹೋಗಿರುವುದರಿಂದ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾಗಿರುವುದು ದುರ್ದೈವದ ಸಂಗತಿಯಾಗಿದೆ. ಕಡಿಮೆ ಹಣಕ್ಕೆ ಸಿಗುತ್ತಿದ್ದ ಸಾರಾಯಿಯನ್ನು ಸರ್ಕಾರ ನಿಷೇಧ ಮಾಡಿದ್ದರಿಂದ ಅನ್ಯಮಾರ್ಗವಿಲ್ಲದೆ ಶ್ರೀಮಂತರ ಸ್ವತ್ತಾಗಿದ್ದ ದುಬಾರಿ ದರದ ವೈನ್ಸ್ಗಳ ಕಡೆಗೆ ವಾಲಿದ ಮದ್ಯವ್ಯಸನಿಗಳು, ದುಬಾರಿಯಾದರೂ ಅದನ್ನೇ ಬಳಸತೊಡಗಿದ್ದರಿಂದ ಮದ್ಯದಂಗಡಿ ಮಾಲೀಕರಿಗೆ ಮೇರೆಯೇ ಇಲ್ಲದಂತಾಗಿದೆ.
ಸಾರಾಯಿ ನಿಷೇಧವನ್ನೇ ಎನ್ಕ್ಯಾಷ್ ಮಾಡಿಕೊಂಡ ಬಾರ್/ವೈನ್ಸ್ ಮಾಲೀಕರು ತಮ್ಮ ತಮ್ಮಲ್ಲೇ ಒಡಂಬಡಿಕೆ ಮಾಡಿಕೊಂಡು ಗ್ರಾಹಕರನ್ನು ಸುಲಿಗೆ ಮಾಡತೊಡಗಿರುವುದು ಚನ್ನಪಟ್ಟಣ ಹಾಗೂ ಪಕ್ಕದ ರಾಮನಗರಗಳಲ್ಲಿ ಅವ್ಯಾಹತವಾಗಿ ನಡೆದಿದೆ. ಮದ್ಯದ ಬಾಟಲಿಗಳ ಮೇಲೆ ನಮೂದಾಗಿರುವ ಎಂಆರ್ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮದ್ಯ ಮಾರಾಟವಾಗುತ್ತಿದ್ದು, ಈ ಕೃತ್ಯ ರಾಜಾರೋಷವಾಗಿಯೇ ನಡೆದಿದೆ. ಈ ಕೃತ್ಯದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಹ ಷಾಮೀಲಾಗಿದ್ದಾರೆ ಎಂದು ಮದ್ಯಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಪ್ರಶ್ನಿಸಿದರೆ ಬಾರ್ ಮಾಲೀಕರು ಉದ್ದಟತನ ಪ್ರದರ್ಶಿಸುವುದಲ್ಲದೆ, ಗೂಂಡಾಗಿರಿಯನ್ನೂ ಸಹ ಪ್ರದರ್ಶಿಸುತ್ತಾರೆ ಹಾಗೂ ಬೆದರಿಸುತ್ತಾರೆ ಎಂದಿರುವ ಗ್ರಾಹಕರು, ಯಾರಿಗೆ ಬೇಕಾದರೂ ದೂರು ನೀಡಿ, ನಾವು ಕೇರ್ ಮಾಡುವುದಿಲ್ಲ ಎಂದೂ ಸಹ ಅಹಂಕಾರದಿಂದ ಮಾತನಾಡುತ್ತಾರೆ ಎಂದಿದ್ದಾರೆ. ಅದೂ ಅಲ್ಲದೆ ಇಲಾಖೆಯ ಅಧಿಕಾರಿಗಳಿಗೆ ಮಾಸಿಕ ಇಂತಿಷ್ಟು ಲಂಚ ನೀಡಬೇಕು, ಪೊಲೀಸರಿಗೆ ಕಾಣಿಕೆ ಸಲ್ಲಿಸಬೇಕು ಅದಕ್ಕಾಗಿ ಹೆಚ್ಚು ಹಣ ವಸೂಲಿ ಮಾಡುತ್ತಿದ್ದೇವೆಂದು ಸಬೂಬು ಹೇಳುತ್ತಾರೆ ಎಂದು ಗ್ರಾಹಕರು ಆರೋಪಿಸಿದ್ದಾರೆ. ಇದಲ್ಲದೆ ಚಿಲ್ಲರೆ ಮದ್ಯ ಮಾರಾಟ ಮಾಡುವಾಗ ಅಳತೆಯಲ್ಲಿ ಸಹ ಮೋಸ ಮಾಡುತ್ತಿದ್ದು, ಮದ್ಯವನ್ನು ಕಲಬೆರಕೆ ಮಾಡಿ ನೀಡುತ್ತಾರೆ ಹಾಗೂ ಕಡಿಮೆ ದರ್ಜೆಯ ಮದ್ಯವನ್ನು ಹೆಚ್ಚು ಬೆಲೆಯ ಮದ್ಯದ ಜೊತೆಗೆ ಸೇರಿಸಿ, ಚಿಲ್ಲರೆ ಮಾರಾಟ ಮಾಡಿ ವಂಚಿಸುತ್ತಿದ್ದಾರೆ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಂತೂ ಈ ದಂಧೆ ಅನಿಯಮಿತವಾಗಿ ನಡೆಯುತ್ತಿದ್ದು, ಕಲಬೆರಕೆ ಮದ್ಯವನ್ನು ಗ್ರಾಹಕರಿಗೆ ನೀಡಲಾಗುತ್ತಿದೆ. ಮಾರುಕಟ್ಟೆ ಬೆಲೆಗಿಂತ ಹೆಚ್ಚಾಗಿ ಈ ಕಲಬೆರಕೆ ಮದ್ಯವನ್ನು ನೀಡುತ್ತಿದ್ದು, ಇದನ್ನು ತಿಳಿಯದೆ ಗ್ರಾಮಾಂತರ ಪ್ರದೇಶಗಳ ಗ್ರಾಹಕರು ಅದನ್ನೇ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಲ್ಲಿ ಸಂದೇಹವಿಲ್ಲ. ಇತ್ತೀಚೆಗಷ್ಟೇ ಗುಜರಾತ್ ನಲ್ಲಿ ಕಲಬೆರಕೆ ಮದ್ಯ ಸೇವಿಸಿ ಅನೇಕರು ಸಾವಿಗೀಡಾಗಿದ್ದು ನಮಗೆ ಪಾಠವಾಗದಿರುವುದು ದುರ್ದೈವದ ಸಂಗತಿ.
ಕಣ್ಣೆದುರಿಗೇ ಈ ಹಗಲು ದರೋಡೆ ನಡೆಯುತ್ತಿದ್ದರೂ ಸಂಬಂಧಿಸಿದವರು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದನ್ನು ನೋಡಿದರೆ ಇಲಾಖೆಯ ಅಧಿಕಾರಿಗಳು ಇದರಲ್ಲಿ ಷಾಮೀಲಾಗಿರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದಿರುವ ಗ್ರಾಹಕರು, ಪ್ರತಿ ತಿಂಗಳು ಹೀಗೆ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಲಕ್ಷಾಂತರ ರೂ. ಹಣ ಯಾರ ಜೇಬಿಗಿಳಿಯುತ್ತಿದೆ. ಈ ಅಕ್ರಮಗಳನ್ನು ತಡೆಯುವಂತೆ ಹಲವಾರು ಬಾರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಗಮನಹರಿಸುವಂತೆ ರಾಜ್ಯದ ಅಬಕಾರಿ ಸಚಿವರಿಗೂ ಕೂಡಾ ಪತ್ರಮುಖೇನ ದೂರು ನೀಡಿರುವ ಕೆಲವು ಗ್ರಾಹಕರು ಈ ಸುಲಿಗೆ ಕೂಡಲೇ ನಿಲ್ಲದಿದ್ದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆ ಚನ್ನಪಟ್ಟಣ ಹಾಗೂ ನೆರೆಯ ರಾಮನಗರಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಈ ವಂಚನೆಯಿಂದ ಗ್ರಾಹಕರು ಜಾಗೃತರಾಗಿದ್ದು, ಮುಂದಿನ ದಿನಗಳಲ್ಲಿ ಅವರು ಸಿಡಿದೇಳುವ ಮುನ್ನ ಈ ದಂಧೆಗೆ ಕಡಿವಾಣ ಹಾಕಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮುಂದಾಗಬೇಕಾಗಿದೆ. ಹಾಡಹಗಲೇ ನಡೆಯುತ್ತಿರುವ ಈ ದರೋಡೆಗೆ ಮುಕ್ತಿ ಸಿಗುವುದೇ?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications