ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'

By Staff
|
Google Oneindia Kannada News

Ottavio Quattrocchi
ನವದೆಹಲಿ, ಸೆ. 30 : ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಇಟಲಿಯ ವಾಣಿಜ್ಯೋದ್ಯಮಿ ಒಟ್ಟಾವಿಯೋ ಕ್ವಟ್ರೋಕಿ ವಿರುದ್ದ ದಾಖಲಿಸಿದ್ದ ಪ್ರಕರಣ ಕೈಬಿಡಲು ಕೇಂದ್ರ ಸರಕಾರ ಮಂಗಳವಾರ (ಸೆ 29) ನಿರ್ಧರಿಸಿದೆ. ಕ್ವಟ್ರೋಕಿ ವಿರುದ್ದದ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲು ಸರಕಾರ ಅಂತಿಮ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ತಿಳಿಸಿದ್ದಾರೆ.

ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಕ್ವಟ್ರೋಕಿ ವಿರುದ್ದ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದರಿಂದ ಅವರ ವಿರುದ್ದ ದಾಖಲಿಸಿದ್ದ ಎಲ್ಲಾ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಾಲಕೃಷ್ಣನ್ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದೆ.

ಸೋನಿಯಾ ಗಾಂಧಿ ಕುಟುಂಬ ಸ್ನೇಹಿತರಾಗಿರುವ ಕ್ವಟ್ರೋಕಿ ವಿರುದ್ದ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಅವರ ಸ್ವಿಸ್ ಬ್ಯಾಂಕ್ ಖಾತೆಗಳ ಮುಟ್ಟುಗೋಲನ್ನು ತೆರವುಗೊಳಿಸಲಾಗಿದೆ. ಕಾನೂನು ಬಾಹಿರವಾಗಿ ಸಂಪಾದಿಸಿದ ಹಣವನ್ನು ಈಗಾಗಲೇ ವಾಪಸ್ ಪಡೆಯಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X