ಶಿವಮೊಗ್ಗ ಗ್ರಾಹಕರಿಗೆ ಬಿಎಸ್ಎನ್ಎಲ್ ವಿಶೇಷ ಕೊಡುಗೆ

ಅವರು ಬುಧವಾರ ತಮ್ಮ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಇತ್ತೀಚಿನ ಸರ್ಕಾರದ ಆದೇಶದನ್ವಯ ಶಿವಮೊಗ್ಗ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಅನುದಾನದಲ್ಲಿ ಅತಿ ಕಡಿಮೆ ದರದಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು ಒದಗಿಸಲಾಗುವುದು ಎಂದ ಅವರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ ಆಪ್ಟಿಕಲ್ ಫೈಬರ್ ಸಂಪರ್ಕಕೊಂಡಿ ನೀಡುವುದರೊಂದಿಗೆ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲಾಗುವುದೆಂದು ಹೇಳಿದರು.
ಅಗತ್ಯವಿರುವ ಕಡೆ ಆಪ್ಟಿಕಲ್ ಫೈಬರ್ ವರ್ತುಲ ನಿರ್ಮಿಸಿ ಹೆಚ್ಚಿನ ರಕ್ಷಣೆಯನ್ನು ನೀಡುವಂತೆ ನಿಗಾವಹಿಸಲಾಗಿದೆ. ನಿಸ್ತಂತು ತಂತ್ರಜ್ಞಾನವನ್ನು ಬಳಸುವುದರ ಮೂಲಕ ಅಂತರ್ಜಾಲವನ್ನು ವೈರು ಅಥವಾ ಕೇಬಲ್ ವ್ಯವಸ್ಥೆಯಿಲ್ಲದ ಪ್ರದೇಶಗಳಿಗೂ ವಿಸ್ತರಿಸಿ, ಜಿಲ್ಲೆಯಲ್ಲಿ ಅಂತರಜಲ ಕ್ರಾಂತಿಯನ್ನು ವ್ಯವಸ್ಥಿತವಾಗಿ ಸ್ಥಾಪಿಸಲಾಗಿದೆ ಎಂದು ಅವರು ವಿವರಿಸಿದರು. ಶಿವಮೊಗ್ಗ ಜಿಲ್ಲೆಯ 140 ದೂರವಾಣಿ ವಿನಿಮಯ ಕೇಂದ್ರಗಳಲ್ಲಿಯೂ ಬ್ರಾಡ್ ಬ್ಯಾಂಡ್ ಸೇವೆಯನ್ನು ನೀಡಲಾಗಿದೆ ಎಂದ ಅವರು ರಾಜ್ಯ ಸರ್ಕಾರದ ಅಗತ್ಯತೆಗಳು, ಅಂತಾರಾಷ್ಟ್ರೀಯ ಸೇವಾ ಬದ್ಧತೆಯನ್ನು ನಿರ್ವಹಿಸುವುದು ಮತ್ತು ಸರ್ಕಾರದ ಕಾರ್ಯನೀತಿಯ ಅಗತ್ಯತೆಗಳ ಅನುಸಾರ ತಮ್ಮ ಸಂಸ್ಥೆಯು 5000ಕ್ಕೂ ಹೆಚ್ಚು ಬ್ರಾಡ್ ಬ್ಯಾಂಡ್ ಸಂಪರ್ಕಗಳನ್ನು ನೀಡಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸ್ಥಿರ ಅಥವಾ ವಿಲ್ (ಡಬ್ಲು.ಎಲ್.ಎಲ್.) ದೂರವಾಣಿಗಳನ್ನು ಎಲ್ಲಾ ತಾಲೂಕುಗಳಲ್ಲಿ ನೀಡುವುದರೊಂದಿಗೆ ಹಿಂದಿನ ಬೇಡಿಕೆಗಳನ್ನು ಈಡೇರಿಸಿ, ಅರ್ಜಿ ಸಲ್ಲಿಸಿದೊಡನೆ ದೂರವಾಣಿ ಸಂಪರ್ಕಗಳನ್ನು ನೀಡುವ ವ್ಯವಸ್ಥೆಯು ಜಾರಿಯಲ್ಲಿದೆ. ಜಿಲ್ಲೆಯಲ್ಲಿ 95000ಕ್ಕೂ ಹೆಚ್ಚು ಅಂತಹ ಸಂಪರ್ಕಕಗಳು ಕಾರ್ಯನಿರ್ವಹಿಸುತ್ತಿವೆ. ಹಬ್ಬದ ಪ್ರಯುಕ್ತ ನೀಡಿರುವ ನಿಯಮಿತ ಅವಧಿಯ ವಿಶೇಷ ಕೊಡುಗೆಯೊಂದಿಗಿನ ಸ್ಥಿರ/ವಿಲ್ ದೂರವಾಣಿ ಯೋಜನೆಗಳ ವಿವರಗಳನ್ನು ಈಗಾಗಲೇ ಪ್ರಚುರಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮೊಬೈಲ್ (ಜಿ.ಎಸ್.ಎಂ.ತಂತ್ರಜ್ಞಾನ) ಸೇವೆಯನ್ನು ಜಿಲ್ಲೆಯ 114 ಪ್ರದೇಶಗಳಿಗೆ ನೀಡಲಾಗಿದ್ದು, ಇನ್ನೂ ಅಂತಹ 70 ಪ್ರದೇಶಗಳಿಗೆ ವಿಸ್ತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು. ಅವುಗಳನ್ನು ಈ ಆರ್ಥಿಕ ವರ್ಷದಲ್ಲಿ ಸ್ಥಾಪಿಸಲಾಗುವುದು ಎಂದ ಅವರು ಶಿವಮೊಗ್ಗದಲ್ಲಿ ನವೀನ ಮಾದರಿಯ ಹುವಾಯಿ ಸಂಸ್ಥೆಯಿಂದ ತಯಾರಿಸಿದ 8 ಲಕ್ಷ ಸಾಮರ್ಥ್ಯದ ಮೊಬೈಲ್ ಸ್ವಿಚ್ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು. ಇನ್ನು ಕೆಲವೇ ತಿಂಗಳಲ್ಲಿ ಇದು ಸ್ಥಾಪಿತವಾಗಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು. ಇದರೊಂದಿಗೆ ಹಾಲಿ ಮೊಬೈಲ್ ಸೇವೆಯ ಪ್ರಸರಣಾ ಸಾಮರ್ಥ್ಯದಲ್ಲಿ ಶೇ.40ರಷ್ಟು ವೃದ್ಧಿಯಾಗುವುದರೊಂದಿಗೆ ಬಿ.ಎಸ್.ಎನ್.ಎಲ್.ಮೊಬೈಲ್ ಜಾಲ ವಿಸ್ತರಣೆಯಲ್ಲಿ ಗಣನೀಯ ಸುಧಾರಣೆಯಾಗಲಿದೆ ಎಂದು ಹೇಳಿದರು.
ಬಿ.ಎಸ್.ಎನ್.ಎಲ್.ಸೇವೆ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಎಸ್.ದತ್ತಾತ್ರಿ, ಕಿರಿಯ ದೂರವಾಣಿ ಅಧಿಕಾರಿ (ಮಾರಾಟ)ಯವರನ್ನು ಖುದ್ದಾಗಿ ಅಥವಾ ಅವರ ಮೊಬೈಲ್ ಸಂಖ್ಯೆ-94490 15599 ಸಂಪರ್ಕಿಸುವಂತೆ ಅವರು ಕೋರಿದರು. ದತ್ತಾತ್ರಿ ಎಸ್.ಆರ್.ಎನ್.ಪೈ, ನಾರಾಯಣ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications