ಪ್ರವಾಹ ಪೀಡಿತ ಪ್ರದೇಶಕ್ಕೆ 100 ಕೋ ಪರಿಹಾರ

ಮುನಿಸಿಕೊಂಡ ವರುಣನ ಆರ್ಭಟಕ್ಕೆ ರಾಜ್ಯ ಸರಕಾರ ಕೂಡಾ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಸುತ್ತೂರುಮಠದಲ್ಲಿ ಮೂರು ದಿನಗಳ ಸಹಚಿಂತನ ಶಿಬಿರದಲ್ಲಿ ಯೋಗ ಹಾಗೂ ವ್ಯಾಯಾಮದ ಮೂಲಕ ಉಲ್ಲಾಸಿತರಾಗಿರುವ ರಾಜ್ಯ ಸರಕಾರ ಇಂದು ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿತು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಕ್ಕೆ ತಕ್ಷಣ 100 ಕೋಟಿ ರುಪಾಯಿಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈಗಾಗಲೇ 150 ಕೋಟಿ ರುಪಾಯಿ ಪ್ರಕೃತಿ ವಿಕೋಪ ನಿಧಿಯಲ್ಲಿದೆ. ಅದನ್ನು ಹೊರತುಪಡಿಸಿ 100 ಕೋಟಿ ರುಪಾಯಿಗಳನ್ನು ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ನೆರೆಯಲ್ಲಿ ಸಿಕ್ಕಿರುವ ಜನರ ರಕ್ಷಣೆಗೆ ಸರಕಾರ ಈಗಾಗಲೇ ಕ್ರಮಕೈಗೊಳ್ಳಲಾಗಿದ್ದು, 10 ಹೆಲಿಕ್ಯಾಪ್ಟರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಸ್ಥಳಗಳಿಗೆ ರವಾನಿಸಲಾಗಿದೆ. ರಾಷ್ಟ್ರೀಯ ವಿಕೋಪ ಪರಿಹಾರ ತಂಡ, ಸೇನೆ ತಂಡ, ನೌಕಾ ಪಡೆ ಹಾಗೂ ಪೊಲೀಸರ ಮೂಲಕ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯ ಮುಂದುವರೆದಿದೆ. ಇಂದು ಹಾವೇರಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗುವುದು. ಅಕ್ಟೋಬರ್ 4 ರಂದು ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲಿ ನೆರ ಹಾವಳಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ನೆರೆ ಹಾವಳಿಗೆ ತುತ್ತಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯದ ಉಸ್ತುವಾರಿಯನ್ನು ಕರ್ನಾಟಕ ವಿದ್ಯುತ್ ನಿಗಮದ ಅಧ್ಯಕ್ಷ ಎಂ ಎನ್ ಜಾಮದಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ನೆರೆಯ ಸಂಪೂರ್ಣ ವರದಿ ಬಂದ ನಂತರ ಹಣಕಾಸಿನ ಸಹಾಯಕ್ಕೆ ಕೇಂದ್ರ ಸರಕಾರದ ಮೋರೆ ಹೋಗಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗಂಜೀ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ರಾಜ್ಯದ ಬಸ್ ಹಾಗೂ ರೈಲ್ವೆ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ಕೂಡಾ ಕೇಂದ್ರದ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದು, ಸಾಧ್ಯವಾದ ಮಟ್ಟಿಗೆ ಕೇಂದ್ರದಿಂದ ಹಣಕಾಸಿನ ನೆರವಿಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications