ಪಟ್ಟದಕಲ್ಲು ದೇವಸ್ಥಾನಗಳ ಮೇಲೆ 700ಕ್ಕೂ ಹೆಚ್ಚು ಜನ
ಬೆಂಗಳೂರು, ಅ. 3 : ಹಿಂದೆಂದೂ ಕಾಣದಂತೆ ಜಲಪ್ರಳಯದಿಂದ ಉತ್ತರ ಕರ್ನಾಟಕದಲ್ಲಿ ನೂರಾರು ಜನ ಸಾವಿಗೀಡಾಗಿ, ಸಾವಿರಾರು ಜನ ಮನೆ-ಮಠ, ಜಾನುವಾರುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದು ಮಾತ್ರವಲ್ಲ ಐತಿಹಾಸಿಕ ಮಹತ್ವವುಳ್ಳ ದೇವಾಲಯಗಳು ಕೂಡ ಸಂಕಷ್ಟಕ್ಕೀಡಾಗಿವೆ.
ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲು ದೇವಾಲಯ ಸಂಪೂರ್ಣ ಜಲಮಯವಾಗಿದೆ, ರಾಯಚೂರು ಜಿಲ್ಲೆಯ ಮಂತ್ರಾಲಯದಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿದಿದ್ದರಿಂದ ಬೃಂದಾವನ ಕೂಡ ನೀರಿನಿಂದ ತುಂಬಿಕೊಂಡಿದೆ. ಮಂತ್ರಾಲಯದ ದೇವಸ್ಥಾನಕ್ಕೆ ಮತ್ತು ವಸತಿಗೃಹಗಳಿಗೆ ಸಾಕಷ್ಟು ಹಾನಿ ಸಂಭವಿಸಿದ್ದರಿಂದ ಕೂಡಲೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 10 ಕೋಟಿ ರು. ಬಿಡುಗಡೆ ಮಾಡುವುದಾಗಿ ಮೂರು ದಿನಗಳ ಸುತ್ತೂರು ಚಿಂತನ ಮಂಥನದ ನಂತರ ನೆರೆ ವೀಕ್ಷಣೆಗಾಗಿ ಉತ್ತರ ಕರ್ನಾಟಕಕ್ಕೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಪಟ್ಟದಕಲ್ಲಿನ ಸುಮಾರೂ ಹತ್ತಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಸುಮಾರೂ 700ಕ್ಕೂ ಹೆಚ್ಚಿನ ಜನ ಆಶ್ರಯ ಪಡೆದಿದ್ದಾರೆ. ಕಳೆದ ಎರಡು ದಿನಗಳಿಂದ ಮಳೆಯಲ್ಲಿಯೇ ನೀರು, ಆಹಾರವಿಲ್ಲದೆ ರಕ್ಷಣೆಗಾಗಿ ಕಾದು ಕುಳಿತಿದ್ದಾರೆ. ಮಕ್ಕಳು, ಹೆಂಗಸರು ಮತ್ತು ಹಿರಿಯ ಜೀವಗಳ ಪರಿಸ್ಥಿತಿ ಹೇಳತೀರದಂತಾಗಿದೆ. ನೆರೆಯಲ್ಲಿ ಸಿಲುಕಿದ ಜನರನ್ನು ದೇವರು ಕೂಡ ಕಾಪಾಡಲಾರದಂಥ ಪರಿಸ್ಥಿತಿ ಬಂದೊದಗಿದೆ.
ಮಂತ್ರಾಲಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದರೂ ನೂರಾರು ಜನ ಬಸ್ ಮತ್ತು ರೈಲು ಸಂಪರ್ಕವಿಲ್ಲದೆ ಅಲ್ಲಿಯೇ ಉಳಿಯುವಂತಾಗಿದೆ. ಅಲ್ಲಿ ಸಿಲುಕಿರುವ ಜನರಿಗೆ ಆಹಾರ ಪೊಟ್ಟಣಗಳನ್ನು ಮಾತ್ರ ಪೂರೈಸಲಾಗಿದೆ, ರಕ್ಷಣಾ ಕಾರ್ಯಕ್ಕೆ ಸರಕಾರ ಮುಂದಾಗಿಲ್ಲ. ಅಪಾರ ಪ್ರಮಾಣದ ಮಳೆಯಿಂದಾಗಿ ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟೆಗೆ ಹಾನಿಯಾಗಿದೆ ಎಂಬ ವರದಿ ಬಂದಿದೆ. ಅದು ಕಟ್ಟೆಯೊಡೆದರೆ ಮತ್ತಷ್ಟು ಹಾನಿ ಸಂಭವಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ, ಇಂದಿನಿಂದ ರಾಯಚೂರು ಜಿಲ್ಲೆಯಲ್ಲಿ ಬಸ್ ಸಂಚಾರ ನಿಧಾನವಾಗಿ ಶುರುವಾಗುತ್ತಿದೆ. ರಾಯಚೂರುನಿಂದ ಬೆಂಗಳೂರಿಗೆ ಬರುವ ಜನರಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications