ಪಟ್ಟದಕಲ್ಲು ದೇವಸ್ಥಾನಗಳ ಮೇಲೆ 700ಕ್ಕೂ ಹೆಚ್ಚು ಜನ
ಬೆಂಗಳೂರು, ಅ. 3 : ಹಿಂದೆಂದೂ ಕಾಣದಂತೆ ಜಲಪ್ರಳಯದಿಂದ ಉತ್ತರ ಕರ್ನಾಟಕದಲ್ಲಿ ನೂರಾರು ಜನ ಸಾವಿಗೀಡಾಗಿ, ಸಾವಿರಾರು ಜನ ಮನೆ-ಮಠ, ಜಾನುವಾರುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದು ಮಾತ್ರವಲ್ಲ ಐತಿಹಾಸಿಕ ಮಹತ್ವವುಳ್ಳ ದೇವಾಲಯಗಳು ಕೂಡ ಸಂಕಷ್ಟಕ್ಕೀಡಾಗಿವೆ.
ಬಾಗಲಕೋಟೆ ಜಿಲ್ಲೆಯ ಪಟ್ಟದಕಲ್ಲು ದೇವಾಲಯ ಸಂಪೂರ್ಣ ಜಲಮಯವಾಗಿದೆ, ರಾಯಚೂರು ಜಿಲ್ಲೆಯ ಮಂತ್ರಾಲಯದಲ್ಲಿ ತುಂಗಭದ್ರಾ ನದಿ ಉಕ್ಕಿ ಹರಿದಿದ್ದರಿಂದ ಬೃಂದಾವನ ಕೂಡ ನೀರಿನಿಂದ ತುಂಬಿಕೊಂಡಿದೆ. ಮಂತ್ರಾಲಯದ ದೇವಸ್ಥಾನಕ್ಕೆ ಮತ್ತು ವಸತಿಗೃಹಗಳಿಗೆ ಸಾಕಷ್ಟು ಹಾನಿ ಸಂಭವಿಸಿದ್ದರಿಂದ ಕೂಡಲೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 10 ಕೋಟಿ ರು. ಬಿಡುಗಡೆ ಮಾಡುವುದಾಗಿ ಮೂರು ದಿನಗಳ ಸುತ್ತೂರು ಚಿಂತನ ಮಂಥನದ ನಂತರ ನೆರೆ ವೀಕ್ಷಣೆಗಾಗಿ ಉತ್ತರ ಕರ್ನಾಟಕಕ್ಕೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಪಟ್ಟದಕಲ್ಲಿನ ಸುಮಾರೂ ಹತ್ತಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಸುಮಾರೂ 700ಕ್ಕೂ ಹೆಚ್ಚಿನ ಜನ ಆಶ್ರಯ ಪಡೆದಿದ್ದಾರೆ. ಕಳೆದ ಎರಡು ದಿನಗಳಿಂದ ಮಳೆಯಲ್ಲಿಯೇ ನೀರು, ಆಹಾರವಿಲ್ಲದೆ ರಕ್ಷಣೆಗಾಗಿ ಕಾದು ಕುಳಿತಿದ್ದಾರೆ. ಮಕ್ಕಳು, ಹೆಂಗಸರು ಮತ್ತು ಹಿರಿಯ ಜೀವಗಳ ಪರಿಸ್ಥಿತಿ ಹೇಳತೀರದಂತಾಗಿದೆ. ನೆರೆಯಲ್ಲಿ ಸಿಲುಕಿದ ಜನರನ್ನು ದೇವರು ಕೂಡ ಕಾಪಾಡಲಾರದಂಥ ಪರಿಸ್ಥಿತಿ ಬಂದೊದಗಿದೆ.
ಮಂತ್ರಾಲಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದರೂ ನೂರಾರು ಜನ ಬಸ್ ಮತ್ತು ರೈಲು ಸಂಪರ್ಕವಿಲ್ಲದೆ ಅಲ್ಲಿಯೇ ಉಳಿಯುವಂತಾಗಿದೆ. ಅಲ್ಲಿ ಸಿಲುಕಿರುವ ಜನರಿಗೆ ಆಹಾರ ಪೊಟ್ಟಣಗಳನ್ನು ಮಾತ್ರ ಪೂರೈಸಲಾಗಿದೆ, ರಕ್ಷಣಾ ಕಾರ್ಯಕ್ಕೆ ಸರಕಾರ ಮುಂದಾಗಿಲ್ಲ. ಅಪಾರ ಪ್ರಮಾಣದ ಮಳೆಯಿಂದಾಗಿ ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟೆಗೆ ಹಾನಿಯಾಗಿದೆ ಎಂಬ ವರದಿ ಬಂದಿದೆ. ಅದು ಕಟ್ಟೆಯೊಡೆದರೆ ಮತ್ತಷ್ಟು ಹಾನಿ ಸಂಭವಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ, ಇಂದಿನಿಂದ ರಾಯಚೂರು ಜಿಲ್ಲೆಯಲ್ಲಿ ಬಸ್ ಸಂಚಾರ ನಿಧಾನವಾಗಿ ಶುರುವಾಗುತ್ತಿದೆ. ರಾಯಚೂರುನಿಂದ ಬೆಂಗಳೂರಿಗೆ ಬರುವ ಜನರಿಗೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications