ನೆರೆ ಜಿಲ್ಲೆಗಳಲ್ಲಿ ಪೇಜಾವರ ಶ್ರೀಗಳ ಪ್ರವಾಸ
ಬೆಂಗಳೂರು, ಅ.5: ಪೇಜಾವರದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಸೋಮವಾರದಿಂದ ಮಂತ್ರಾಲಯ, ಬಾಗಲಕೋಟ ಸೇರಿದಂತೆ ನೆರೆಪೀಡಿತ ಪ್ರದೇಶಗಳಲ್ಲಿ 4 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿನ ಸಂತ್ರಸ್ತರಿಗೆ ಆಹಾರ, ಬಟ್ಟೆಗಳನ್ನು ವಿತರಿಸಲಿದ್ದಾರೆ. ಭಕ್ತಾದಿಗಳೂ ನೆರವಿಗೆ ಧಾವಿಸುವಂತೆ ಕರೆ ನೀಡಿದ್ದಾರೆ.
ಆಹಾರ, ಬಟ್ಟೆ, ಧಾನ್ಯ ಇಲ್ಲವೆ ಹಣವನ್ನು ಬೆಂಗಳೂರಿನ ಪೂರ್ಣಪ್ರಜ್ಞಾ ವಿದ್ಯಾಪೀಠಕ್ಕೆ ಇಲ್ಲವೆ ಶ್ರೀಮಠದ ಜನತಾ ಕಲ್ಯಾಣ ನಿಧಿ'ಗೆ ದೇಣಿಗೆ ನೀಡಬಹುದು. ಚೆಕ್, ಡಿ.ಡಿ ಇಲ್ಲವೆ ನಗದು ಹಣವನ್ನು (80ಜಿ ಅಡಿಯಲ್ಲಿ ತೆರಿಗೆ ವಿನಾಯಿತಿ ಇದೆ) ಕಳುಹಿಸಬೇಕಾದ ವಿಳಾಸ:
ಜನತಾ ಕಲ್ಯಾಣ ನಿಧಿ',
ಎಸ್.ಬಿ ನಂ: 12112, ಕೆನರಾಬ್ಯಾಂಕ್,
ಗಿರಿನಗರ ಶಾಖೆ, ಬೆಂಗಳೂರು.
ಹೆಚ್ಚಿನ ಮಾಹಿತಿಗೆ:9845013336(ಡಿ.ಪಿ.ಅನಂತ್) ಇಲ್ಲವೆ
(080)- 26791236 (ಕೇಶವಾಚಾರ್) ಸಂಪರ್ಕಿಸಬಹುದು.
ಜೆಡಿಎಸ್ ಸಮರ್ಪಣೆ
ಜೆಡಿಎಸ್ ಶಾಸಕರು, ಸಂಸದರು ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಸಂಸದ ಚೆಲುವರಾಯಸ್ವಾಮಿ, ಈ ವಿಷಯವನ್ನು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪ್ರವಾಹ ಪೀಡಿತ 8 ಜಿಲ್ಲೆಗಳಲ್ಲಿ ಅ.8ರಿಂದ 15ರವರೆಗೆ ಜೆಡಿಎಸ್ ಮುಖಂಡರು ಪ್ರವಾಸ ಕೈಗೊಂಡು ಪರಿಹಾರಗಳ ವಸ್ತುಗಳನ್ನು ವಿತರಿಸಲಿದ್ದಾರೆ ಎಂದು ವಿವರಿಸಿದರು.
10 ಕೋಟಿ ರೂ. ಸಂಗ್ರಹ
ಸಂತ್ರಸ್ತರ ನೆರವಿಗೆ ಜೆಡಿಎಸ್ ಅಂದಾಜು 10 ಕೋಟಿ ರೂ. ಸಂಗ್ರಹಿಸಲು ತೀರ್ಮಾನಿಸಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಭಾಗದಿಂದಲೇ 2 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದ್ದೇವೆ ಎಂದರು. ಮುಖಂಡರಾದ ಸಿ.ನಾರಾಯಣ ಸ್ವಾಮಿ, ವೈ.ಎಸ್.ವಿ.ದತ್ತ, ಬಾಲಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.
(ಸ್ನೇಹ ಸೇತು: ವಿಜಯಕರ್ನಾಟಕ)
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications