ನೀರ್ಚಾಲುವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಹಬ್ಬಕ್ಕೆ ಸಿದ್ಧತೆ

Neerchalu college
ಕಾಸರಗೋಡು, ಅ.5:ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ವತಿಯಿಂದ ಜನವರಿ ಮೊದಲ ವಾರದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗಳಲ್ಲಿ ನಡೆಸಲು ತೀರ್ಮಾನಿಸಿದ ಜಿಲ್ಲಾ ಯುವಜನೋತ್ಸವ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಛೇರಿಯ ಉದ್ಘಾಟನೆಯನ್ನು ಹಿರಿಯ ವಿದ್ವಾಂಸ ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಖಂಡಿಗೆ ಶಾಮ ಭಟ್ ಅವರು 03.10.2009 ಶನಿವಾರ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯಲ್ಲಿ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಅವರು ಮಾತನಾಡಿ “ಕಾಸರಗೋಡಿನ ಕನ್ನಡ ಶಕ್ತಿಯನ್ನು ಈ ಸಮ್ಮೇಳನ ಪ್ರತಿಬಿಂಬಿಸಬೇಕು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಒತ್ತು ಕೊಡುವ ಕಾರ್ಯಕ್ರಮಗಳು ಈ ಸಮ್ಮೇಳನದಲ್ಲಿ ನಡೆಯಲಿದ್ದು ಇದರ ಯಶಸ್ವಿಗೆ ಎಲ್ಲ ಕನ್ನಡಿಗರು ಒಂದಾಗಿ ನಿಂತು ದುಡಿಯಬೇಕಾಗಿದೆ" ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ಅಧ್ಯಕ್ಷ ಎಸ್.ವಿ.ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವಜನೋತ್ಸವದ ರೂಪುರೇಷೆಯ ಬಗೆಗೆ ಯುವಜನೋತ್ಸವ ಸಮಿತಿ ಅಧ್ಯಕ್ಷ ಮಾಯಿಪ್ಪಾಡಿ ವಿಶ್ವನಾಥ ರೈ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಖೆಯ ಬಗ್ಗೆ ಸಮಿತಿ ಸಂಚಾಲಕ ಕೃಷ್ಣಯ್ಯ ಅನಂತಪುರ ವಿವರಿಸಿದರು.

ಎಂ.ವಿ.ಭಟ್ ಮಧುರಂಗಾನ, ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ, ಕ.ಸಾ.ಪ. ತಾಲೂಕು ಘಟಕದ ಅಧ್ಯಕ್ಷ ರಾಘವ ಬಲ್ಲಾಳ್, ಸುಕುಮಾರ ಆಲಂಪಾಡಿ, ಜಯದೇವ ಖಂಡಿಗೆ ಹಾಗೂ ಸ್ವಾಗತ ಸಮಿತಿಯ ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಲಿಂಗೇಶ್ವರ ಭಟ್ ಎಂ.ವಿ ಸ್ವಾಗತಿಸಿ ತಾಲೂಕು ಕಾರ್ಯದರ್ಶಿ ರಾಮಚಂದ್ರ ಧರ್ಮತ್ತಡ್ಕ ವಂದಿಸಿದರು. ಗೌರವ ಕಾರ್ಯದರ್ಶಿ ರತ್ನಾಕರ ಮಲ್ಲಮೂಲೆ ಕಾರ್ಯಕ್ರಮ ನಿರೂಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+