ಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ಸೆಲರ್ ಮಿತ್ತಲ್ ಕಂಪನಿಯ ಮುಖ್ಯಸ್ಥ ಲಕ್ಷ್ಮಿ ಮಿತ್ತಲ್, ಜಾರ್ಖಂಡ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಉಕ್ಕು ಕಂಪನಿಯ ಯೋಜನೆ ಕೈಬಿಡಲಾಗಿದೆ ಎಂದು ಲಂಡನ್ ಮೂಲದ ಬ್ರಿಟನ್ ಮೂಲದ ಫೈನಾನ್ಸಿಯಲ್ ಟೈಮ್ಸ್ ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.
ಅಲ್ಲಿನ ಸರಕಾರ ಕಂಪನಿಗೆ ಬೇಕಿರುವ ಅಗತ್ಯ ಭೂಮಿ ಒದಗಿಸುವಲ್ಲಿ ವಿಫಲವಾಗಿದೆ. ಮತ್ತು ರೈತರು ಕಂಪನಿಗೆ ಭೂಮಿ ನೀಡಲು ಹಿಂದೇಟು ಹಾಕಿರುವುದು ಲಕ್ಷ್ಮಿ ಮಿತ್ತಲ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಕಂಪನಿ ಸ್ಥಾಪನೆಯ ಕಾರ್ಯಗಳು ಕಳೆದ ಎರಡು ವರ್ಷಗಳಿಂದ ಆರಂಭವಾಗಿವೆ. ಕೋಟ್ಯಂತರ ರುಪಾಯಿ ಹಣವೂ ನಷ್ಟವಾಗಿದೆ. ಇಂತಹ ಸಮಯದಲ್ಲಿ ಸರಕಾರ ಮತ್ತು ರೈತರು ಕಂಪನಿಯೊಂದಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದು ಮತ್ತೊಂದು ಕಾರಣವಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.
ಭಾರತದ ಇತರೆ ನಗರಗಳಲ್ಲಿ ಉಕ್ಕು ಕಂಪನಿ ಸ್ಥಾಪನೆಗೆ ಲಕ್ಷ್ಮಿ ಮಿತ್ತಲ್ ಪರಿಶೀಲನೆ ನಡೆಸಿದ್ದಾರೆ, ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಬೇಗ ಎಚ್ಚತ್ತುಕೊಂಡು ಉಕ್ಕು ಕಂಪನಿಯನ್ನು ರಾಜ್ಯಕ್ಕೆ ತರಲು ಯತ್ನಿಸಬೇಕು. ಟಾಟಾ ನ್ಯಾನೋ ಕಾರು ತಯಾರಿಕಾ ಕಂಪನಿಯನ್ನು ರಾಜ್ಯ ತರವಲ್ಲಿ ಸರಕಾರ ವಿಫಲವಾಗಿತ್ತು. ಇದರಲ್ಲಿ ಕೂಡಾ ಹಾಗಾಗುವುದು ಬೇಡ.
ಕೈಗಾರಿಕೆ ಮಂತ್ರಿ ಮುರುಗೇಶ ನಿರಾಣಿಗೆ ಸೂಕ್ತ ನಿರ್ದೇಶನ ನೀಡಿ ಉಕ್ಕು ಕಂಪನಿಯನ್ನು ರಾಜ್ಯಕ್ಕೆ ತರುವ ಎಲ್ಲ ಪ್ರಯತ್ನ ಸರಕಾರದಿಂದ ಆಗಬೇಕು. ಆದರೆ, ರಾಜ್ಯದಲ್ಲಿ ವರುಣನ ಮುನಿಸಿನಿಂದ ಆಗಿರುವ ಆನಾಹುತವನ್ನು ಸರಿಪಡಿಸಿದರೆ ಸಾಕು ಎಂಬ ಸ್ಥಿತಿಯಲ್ಲಿ ಸರಕಾರವಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬೇರೆಡೆ ಗಮನ ಹರಿಸಿದರೆ, ಪ್ರತಿಪಕ್ಷಗಳು ಸುಮ್ಮನೆ ಬಿಟ್ಟಾರೆಯೇ ... ?
(ಏಜನ್ಸೀಸ್)
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications