ಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ

ಕಳೆದ ನೂರು ವರ್ಷಗಳಲ್ಲಿ ಈ ಪರಿ ಪ್ರಕೃತಿ ಮುನಿದಿರಲಿಲ್ಲ. ಒಂದು ವಾರದಿಂದ ಸುರಿದ ಮಳೆಯಿಂದಾಗಿ ಜನರ ಜೀವನ ಹರಣವಾಗಿದೆ, ಜಾನುವಾರು, ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಇದರಿಂದಾಗಿ 18 ಜಿಲ್ಲೆಗಳಲ್ಲಿ 18 ಮಿಲಿಯನ್ ಜನ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.
200ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. 25 ಲಕ್ಷ ಹೆಕ್ಟೇರ್ ಸಾಗುವಳಿ ಜಮೀನು ಸಂಪೂರ್ಣ ಸರ್ವನಾಶವಾಗಿದೆ. ರಸ್ತೆ ಮತ್ತು ವಿದ್ಯುತ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. 17 ಸಾವಿರ ಕೋಟಿ ರು.ಗಳಷ್ಟು ಆಸ್ತಿಪಾಸ್ತಿಗೆ ಹಾನಿಯುಂಟಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ಪ್ರವಾಹ ಪೀಡಿತ ಪ್ರದೇಶದಿಂದ ಜನರನ್ನು ರಕ್ಷಿಸಲು ಎಲ್ಲ ಪ್ರಯತ್ನ ನಡೆಸಿದೆ. ಆದರೆ, ಪುನರ್ ವಸತಿ, ಪುನರ್ ನಿರ್ಮಾಣದ ಕಾಮಗಾರಿ ಕೆಲ ಸಮಯ ತೆಗೆದುಕೊಳ್ಳುತ್ತದೆ. ಮನೆಮಠ ಕಳೆದುಕೊಂಡವರಿಗೆ ವಸತಿ, ಮೂಲಸೌಕರ್ಯ ಕಲ್ಪಿಸಬೇಕು. ಇದಕ್ಕಾಗಿ ಕೇಂದ್ರದ ಸಹಾಯವನ್ನೂ ಪಡೆದಿದೆ. ಆದರೂ, ರಾಜ್ಯಕ್ಕೆ ಸಾಕಷ್ಟು ಹಣ, ಇತರ ವಸ್ತುಗಳ ಅಗತ್ಯವಿರುವುದರಿಂದ ಮುಕ್ತಹಸ್ತದಿಂದ ಸಹಾಯ ನೀಡಬೇಕೆಂದು ಯಡಿಯೂರಪ್ಪನವರು ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಇಂದು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಸಿದ ಪಾದಯಾತ್ರೆಯಲ್ಲಿ ನಗರದ ನಾಗರಿಕರು ಭಾವನಾತ್ಮಕವಾಗಿ ಸ್ಪಂದಿಸಿದ್ದಾರೆ, ತಿಳಿದಷ್ಟು ಹಣ, ಬಟ್ಟೆ, ಆಹಾರ ಪದಾರ್ಥಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳು ತಿಳಿಸಿದಂತೆ 500 ಕೋಟಿ ರು.ಯಷ್ಟು ಹಣ ಸಂಗ್ರಹವಾಗಿದೆ. ಪರಿಹಾರ ನಿಧಿಗಾಗಿ ಹಣ ಸಂಗ್ರಹ ಅಭಿಯಾನವನ್ನು ರಾಜ್ಯದ ಇತರ ನಗರಗಳಲ್ಲಿಯೂ ವಿಸ್ತರಿಸಬೇಕೆಂದು ಆಗ್ರಹ ಕೇಳಿಬಂದಿದೆ. ಕೆಲಸ ಇರಲಿ, ಇಲ್ಲದಿರಲಿ, ಮಕ್ಕಳಿರಲಿ, ಮುದುಕರಿರಲಿ ಉತ್ತರ ಕರ್ನಾಟಕದ ಜನರಿಗೆಗಾಗಿ ದೇಣಿಗೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications