ದೇಣಿಗೆ ಹಣ ಕೊಳ್ಳೆ ಹೊಡೆದರೆ ಭಸ್ಮ ಆಗ್ತಾರೆ
ಬೆಂಗಳೂರು, ಅ. 8 : ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ನೆರೆ ಹಾವಳಿಗೆ ಸರಕಾರ ಪರಿಹಾರ ನಿಧಿ ಸಂಗ್ರಹಿಸುತ್ತಿದ್ದು, ನೂರಾರು ಕೋಟಿ ರುಪಾಯಿಗಳು ಜಮಾವಣೆಗೊಂಡಿದೆ. ಆದರೆ, ಸಾರ್ವಜನಿಕರ ಕಳಕಳಿಯ ಹಣ ನೆರೆ ಸಂತ್ರಸ್ಥರಿಗೆ ತಲುಪಲಿದೆಯೇ? ಇಂತಹ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನೆರೆ ಸಂತ್ರಸ್ತರ ದೇಣಿಗೆ ಹಣ ದೇವರ ಹಣ. ಈ ಹಣವನ್ನು ಕೊಳ್ಳೆ ಹೊಡೆದವರು ಭಸ್ಮ ಆಗ್ತಾರೆ. ಒಂದು ಪೈಸೆ ಕೂಡಾ ವ್ಯರ್ಥ ಆಗಲು ಬಿಡಲ್ಲ ಎಂದು ಭವವಸೆ ನೀಡಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇಣಿಗೆ ಹಣ ದುರುಪಯೋಗ ಆಗುವ ಸಾಧ್ಯತೆ ಇದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪಾದಯಾತ್ರೆಯಲ್ಲಿ ಈಗಾಗಲೇ ಸುಮಾರು 500 ಕೋಟಿ ರುಪಾಯಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಸಾರ್ವಜನಿಕರು ಉದಾರವಾಗಿ ದೇಣಿಗೆ ನೀಡಿದ್ದಾರೆ. ನೆರೆ ಸಂತ್ರಸ್ಥರಿಗೆ ಸುಮಾರು 15 ರಿಂದ 20 ಸಾವಿರ ಕೋಟಿ ರುಪಾಯಿಗಳ ಅಗತ್ಯವಿದೆ. ಬಲ್ಲವರು, ಬಡವರು ದೇಣಿಗೆ ನೀಡಲು ಮುಂದಾಗಬೇಕು ಎಂದು ಅವರು ಮನವಿ ಮಾಡಿಕೊಂಡರು. ಎರಡನೇ ದಿನದ ಪಾದಯಾತ್ರೆಯನ್ನು ಜಯನಗರದ ನಾಲ್ಕನೆ ಬ್ಲಾಕಿನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಆರಂಭಿಸಿದರು.
ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಸಾರ್ವಜನಿಕರು ನೀಡಿದ ದೇಣಿಗೆ ಹಣ ನೊಂದ ಸಂತ್ರಸ್ಥರಿಗೆ ತಲುಪಲಿದೆ. ಅದಕ್ಕೆ ಸರಕಾರ ಸೂಕ್ತ ಕ್ರಮಕೈಗೊಳ್ಳಲಿದೆ. ದೇಣಿಗೆ ಹಣ ದೇವರ ಹಣ. ಈ ಹಣವನ್ನು ಕೊಳ್ಳೆ ಹೊಡೆದವರು ಭಸ್ಮಾ ಆಗುತ್ತಾರೆ. ಈ ಹಣವನ್ನು ದುರುಪಯೋಗವಾಗಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಈ ಮಧ್ಯೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ದೇಣಿಗೆ ಹಣ ದುರುಪಯೋಗ ಆಗುವ ಸಾಧ್ಯತೆ ಇದೆ. ಸರಕಾರಕ್ಕೆ ಸಂತ್ರಸ್ಥರ ನೆರವಿಗೆ ಧಾವಿಸುವ ಮನಸ್ಸಿಲ್ಲ. ಮುಖ್ಯಮಂತ್ರಿಗಳು ತಮ್ಮ ಪೊಲೀಸ್ ಸರ್ಪಗಾವಲನ್ನು ಬದಿಗಿರಿಸಿ ಸಂತ್ರಸ್ಥರ ಕಷ್ಟ ನಷ್ಟಗಳನ್ನು ಆಲಿಸಬೇಕು ಎಂದು ಅವರು ಆಗ್ರಹಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications