ಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ

ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ ತೆರಳಿ ನಾರಾಯಣಮೂರ್ತಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥ ನಾರಾಯಣಮೂರ್ತಿ ಹಾಗೂ ಇನ್ಫೋಸಿಸ್ ಸಿಇಓ ಕೆ ಗೋಪಾಲಕೃಷ್ಣ ಅವರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು. ಸಿಎಂ ಜೊತೆಗೆ ಸಂಸದ ಅನಂತಕುಮಾರ್ ಇದ್ದರು.
ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿದ ನಾರಾಯಣಮೂರ್ತಿ ಅವರು ಪ್ರತಿ ಮನೆಗೆ 1 ಲಕ್ಷ ರುಪಾಯಿ ವೆಚ್ಚದಂತೆ ಸುಮಾರು 3000 ಮನೆಗಳನ್ನು ಸಂಸ್ಥೆಯ ವತಿಯಿಂದ ನಿರ್ಮಿಸಿಕೊಡುವುದಾಗಿ ಘೋಷಿಸಿದರು. ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ಕೂಡಾ 3000 ಮನೆಗಳನ್ನು ನಿರ್ಮಿಸಿಕೊಡುವ ವಾಗ್ದಾನ ಮಾಡಿದರು. ವಿಪ್ರೋ ಕಂಪನಿ ಕೂಡಾ ಶೀಘ್ರ ಸಂತ್ರಸ್ಥರ ನೆರವಿಗೆ ಧಾವಿಸುತ್ತೇವೆ ಎಂಬ ಭರವಸೆ ನೀಡಿದೆ. ಆದರೆ, ಎಷ್ಟು ಎನ್ನುವುದು ನಿಖರವಾಗಿ ತಿಳಿಸಿಲ್ಲ. ಈ ಮೂರು ಕಂಪನಿಗಳು ಮಾತ್ರ ಅಧಿಕೃತವಾಗಿ ಘೋಷಿಸಿವೆ. ಉಳಿದ 197 ಕಂಪನಿ ಇನ್ನೂ ಬಾಯಿಬಿಟ್ಟಿಲ್ಲ.
ಸೆಂಚ್ಯೂರಿ ಗ್ರೂಫ್ ಮುಖ್ಯಸ್ಥ ಸತೀಸ್ ರೈ ಮತ್ತು ದಯಾನಂದ ಪೈ ಅವರು 2000 ಮನೆಗಳನ್ನು, ಎಬಿಸಿ ಟ್ರೇಡಿಂಗ್ ಕಂಪನಿ ಮುಖ್ಯಸ್ಥ ಸಿದ್ಧಾರ್ಥ ಅವರು 1000 ಮನೆಗಳನ್ನು, ಬೆಂಗಳೂರು ಮಾರವಾಡಿ ಸಂಘದವರು 1000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸರಕಾರಕ್ಕೆ ಭರವಸೆ ನೀಡಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿ 5000 ಮನೆಗಳು, ಅಬುದಾಬಿ ಉದ್ಯಮಿ 1000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಅಮೆರಿಕದಲ್ಲಿರುವ ಕನ್ನಡ ಸಂಘಗಳು ನೆರವಿಗೆ ಮುಂದೆ ಬಂದಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವರಿಸಿದರು. ತಲಾ ಒಂದೊಂದು ಮನೆ ಒಂದು ಲಕ್ಷ ರುಪಾಯಿ ವೆಚ್ಚದಲ್ಲಿರುತ್ತವೆ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications