ಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ

ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ ತೆರಳಿ ನಾರಾಯಣಮೂರ್ತಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥ ನಾರಾಯಣಮೂರ್ತಿ ಹಾಗೂ ಇನ್ಫೋಸಿಸ್ ಸಿಇಓ ಕೆ ಗೋಪಾಲಕೃಷ್ಣ ಅವರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು. ಸಿಎಂ ಜೊತೆಗೆ ಸಂಸದ ಅನಂತಕುಮಾರ್ ಇದ್ದರು.
ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿದ ನಾರಾಯಣಮೂರ್ತಿ ಅವರು ಪ್ರತಿ ಮನೆಗೆ 1 ಲಕ್ಷ ರುಪಾಯಿ ವೆಚ್ಚದಂತೆ ಸುಮಾರು 3000 ಮನೆಗಳನ್ನು ಸಂಸ್ಥೆಯ ವತಿಯಿಂದ ನಿರ್ಮಿಸಿಕೊಡುವುದಾಗಿ ಘೋಷಿಸಿದರು. ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ಕೂಡಾ 3000 ಮನೆಗಳನ್ನು ನಿರ್ಮಿಸಿಕೊಡುವ ವಾಗ್ದಾನ ಮಾಡಿದರು. ವಿಪ್ರೋ ಕಂಪನಿ ಕೂಡಾ ಶೀಘ್ರ ಸಂತ್ರಸ್ಥರ ನೆರವಿಗೆ ಧಾವಿಸುತ್ತೇವೆ ಎಂಬ ಭರವಸೆ ನೀಡಿದೆ. ಆದರೆ, ಎಷ್ಟು ಎನ್ನುವುದು ನಿಖರವಾಗಿ ತಿಳಿಸಿಲ್ಲ. ಈ ಮೂರು ಕಂಪನಿಗಳು ಮಾತ್ರ ಅಧಿಕೃತವಾಗಿ ಘೋಷಿಸಿವೆ. ಉಳಿದ 197 ಕಂಪನಿ ಇನ್ನೂ ಬಾಯಿಬಿಟ್ಟಿಲ್ಲ.
ಸೆಂಚ್ಯೂರಿ ಗ್ರೂಫ್ ಮುಖ್ಯಸ್ಥ ಸತೀಸ್ ರೈ ಮತ್ತು ದಯಾನಂದ ಪೈ ಅವರು 2000 ಮನೆಗಳನ್ನು, ಎಬಿಸಿ ಟ್ರೇಡಿಂಗ್ ಕಂಪನಿ ಮುಖ್ಯಸ್ಥ ಸಿದ್ಧಾರ್ಥ ಅವರು 1000 ಮನೆಗಳನ್ನು, ಬೆಂಗಳೂರು ಮಾರವಾಡಿ ಸಂಘದವರು 1000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸರಕಾರಕ್ಕೆ ಭರವಸೆ ನೀಡಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿ 5000 ಮನೆಗಳು, ಅಬುದಾಬಿ ಉದ್ಯಮಿ 1000 ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಅಮೆರಿಕದಲ್ಲಿರುವ ಕನ್ನಡ ಸಂಘಗಳು ನೆರವಿಗೆ ಮುಂದೆ ಬಂದಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವರಿಸಿದರು. ತಲಾ ಒಂದೊಂದು ಮನೆ ಒಂದು ಲಕ್ಷ ರುಪಾಯಿ ವೆಚ್ಚದಲ್ಲಿರುತ್ತವೆ.
(ದಟ್ಸ್ ಕನ್ನಡ ವಾರ್ತೆ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications