ಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್

ನೆರೆಪೀಡಿತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪಾದಯಾತ್ರೆ ನಡೆಸುವ ಮೂಲಕ 750 ಕೋಟಿ ರುಪಾಯಿಗಳ ಸಂಗ್ರಹಿಸಿದರೆ, ಕೇಂದ್ರ ಸರಕಾರ 1000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಅನೇಕ ಪ್ರತಿಷ್ಠಿತ ಪತ್ರಿಕೆಗಳು ಯಥಾ ಪ್ರಕಾರ ತಮ್ಮ ಅಳಿಲು ಸೇವೆಯನ್ನು ಮಾಡುತ್ತಿವೆ. ನೆರೆ ಮಂದಿಯ ಕಷ್ಟ ನೋಡದ ನೂರಾರು ಜನ ಸ್ವಯಂ ಪ್ರೇರಿತರಾಗಿ ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ಮುಸ್ಲಿಂ ಸಂಘಟನೆಗಳು, ಕ್ರೈಸ್ತ ಮಿಷನರಿಗಳೂ ಇದರಿಂದ ಹೊರತಲ್ಲ. ಅವು ಕೂಡಾ ಸಂಕಷ್ಟಕ್ಕೆ ಸ್ಪಂದಿಸುತ್ತಿವೆ. ಸುತ್ತೂರು ಮಠ, ಸಿದ್ಧಗಂಗಾ ಮಠ, ಇನ್ಫೋಸಿಸ್, ಬಯೋಕಾನ್, ಸಿಸ್ಕೋ ಸಾಫ್ಟ್ ವೇರ್ ಕಂಪನಿ, ಕರ್ನಾಟಕ ರಕ್ಷಣಾ ವೇದಿಕೆ ಸೇರಿ ಅನೇಕ ಮಠಮಾನ್ಯಗಳು, ಸಂಘ ಸಂಸ್ಥೆಗಳು ಹಾಗೂ ಸಾಫ್ಟ್ ವೇರ್ ಕಂಪನಿಗಳು ಉತ್ತರ ಕರ್ನಾಟಕದ ಜನರ ನೆರವಿಗೆ ಬಂದಿದ್ದಾರೆ.
ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಪಾದಯಾತ್ರೆ ನಡೆಸಿ ಕೋಟ್ಯಂತರ ಹಣ ಸಂಗ್ರಹಿಸಿದೆ. ಜೆಡಿಎಸ್ ಕೂಡಾ ಕೋಟ್ಯಂತರ ಹಣ ನೀಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಪ್ರಧಾನಿ ಅವರು ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಮಾಡಲಿ ಎಂದು ಹೇಳಿದ್ದು ಬಿಟ್ಟರೆ ಪುನಃ ಆ ಬಗ್ಗೆ ಸೊಲ್ಲೆತ್ತಿಲ್ಲ. ರಾಜ್ಯದ ಹಿರಿಯ ರಾಜಕಾರಣಿ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಮಾತ್ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪಾಲ್ಗೊಂಡಿರುವುದು ಜನರು ಕೋಪಕ್ಕೆ ಕಾರಣವಾಗಿದೆ. ಮಾತೆತ್ತಿದ್ದರೆ ರೈತರ ಪರ ಮಾತನಾಡುತ್ತ ಸರಕಾರ ವಿರುದ್ಧ ವಾಗ್ದಾಳಿ ನಡೆಸುವ ಗೌಡರು, ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಸರಿಯಲ್ಲ ಎನ್ನುವುದು ಪ್ರಮುಖ ಪ್ರಶ್ನೆ.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸರಕಾರಕ್ಕೆ ಸಲಹೆ ಸೂಚನೆಗಳ ಅಗತ್ಯವಾಗಿರುತ್ತವೆ. ಹಿರಿಯ ರಾಜಕಾರಣಿಯಾಗಿ ಇದು ಅವರ ಕರ್ತವ್ಯ. ಆದರೆ, ದೇವೇಗೌಡರು ಪ್ರವಾಹ ಪರಿಸ್ಥಿತಿಯ ಬಗ್ಗೆ ಈವರೆಗೂ ಉಸಿರೆತ್ತದ ಗೌಡರು, ರೈತರ ಪರ ಮಾತನಾಡುತ್ತಿರುವುದು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಾಗಿ ಎನ್ನುವುದು ಮೇಲ್ನೋಟಕ್ಕಂತೂ ಸಾಬೀತಾಗಿದೆ. ಸಂತ್ರಸ್ಥರ ನಿಧಿಗೆ ಕೋಟ್ಯಂತರ ಹಣ ಬಂದು ಬಿದ್ದಿದೆ. ಇನ್ನೂ ಕಾಲ ಮಿಂಚಿಲ್ಲ, ನಿಧಿಯ ಹಣವನ್ನು ಹೇಗೆ ಬಳಕೆ ಮಾಡಬೇಕು ಎಂಬುದನ್ನು ರಾಜ್ಯ ಹಿರಿಯ ರಾಜಕಾರಣಿಯಾಗಿ ಗೌಡರು ಮಾಡಬೇಕಿದೆ.
(ದಟ್ಸ್ ಕನ್ನಡ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications