Get Updates
Get notified of breaking news, exclusive insights, and must-see stories!

ರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್

Ashok Singhal
ಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸಿಂಘಾಲ್ ಅವರು ಸ್ಪಷ್ಟ ಮಾತು.

ರಾಜಗೀರ್ ನಲ್ಲಿ ಆಯೋಜಿಸಲಾಗಿದ್ದ ಆರ್ಎಸ್ಎಸ್ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶೇ. 90 ರಷ್ಟು ಕಾಂಗ್ರೆಸ್ ನಾಯಕರು ರಾಮಮಂದಿರ ಕಟ್ಟುವ ಪರವಾಗಿ ಇದ್ದಾರೆ. ಆದರೆ, ಆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮೂಲ ವಿದೇಶವಾಗಿದ್ದರಿಂದ ಕಾಂಗ್ರೆಸ್ ಪಕ್ಷದ ಬಾಯಿ ಮುಚ್ಚಿಕೊಂಡಿದೆ ಎಂದರು.

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡಾಗ ಕೇಂದ್ರದಲ್ಲಿ ಪಿ ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರಕಾರವಿತ್ತು ಎನ್ನುವ ಸಂಗತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ರಾಷ್ಟ್ರೀಯ ಜನತಾದಳದ ಮುಖಂಡ ಲಾಲು ಪ್ರಸಾದ್ ಯಾದವ್ ಅವರು ಇಂದಿಗೂ ಕೂಡಾ ರಾಮಮಂದಿರ ನಿರ್ಮಾಣದ ಪರವಾಗಿದ್ದಾರೆ ಎಂದು ಸಿಂಘಾಲ್ ಹೇಳಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಹಿಂದೂಗಳ ಕರ್ತವ್ಯ ಹಾಗೂ ಸವಾಲು. ಕೋಟ್ಯಂತರ ಹಿಂದೂಗಳ ಕನಸನ್ನು ನನಸು ಮಾಡಬೇಕಿದೆ. ಅದು ನಮ್ಮೆಲ್ಲರ ಮೇಲಿರುವ ಅತ್ಯಂತ ಗುರುತರವಾದ ಜವಾಬ್ದಾರಿ ಎಂದು ಸಿಂಘಾಲ್ ಅಭಿಪ್ರಾಯಪಟ್ಟರು. ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಅಂಶವನ್ನು ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದರು. ಆದರೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಿದರು. ಚುನಾವಣೆಯಲ್ಲಿ ಸೋತ ಬಳಿಕವೂ ಅಡ್ವಾಣಿ ಎರಡು ಬಾರಿ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.

(ಏಜನ್ಸೀಸ್)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+