ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

76ನೇ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ?

|
Google Oneindia Kannada News

Nallur Prasad
ಬೆಂಗಳೂರು, ಅ. 14 : ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆ ಇದೆ.

ಡಿಸೆಂಬರ್ 18 ರಿಂದ 20ರವರೆಗೆ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಪ್ರವಾಹದಿಂದ ಗದಗ ಸೇರಿ ಉತ್ತರ ಕರ್ನಾಟಕದ ಜನ ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಹಿತ್ಯ ಸಮ್ಮೇಳನ ಸಂಬಂಧಿಸಿದ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಕಸಾಪ ಅಧ್ಯಕ್ಷ ನಲ್ಲೂರು ಪ್ರಸಾದ್, ಪ್ರವಾಹಕ್ಕೆ ಸಿಲುಕಿ ರಾಜ್ಯವೇ ಸಂಕಟದಿಂದ ನರಳುತ್ತಿರುವಾಗ ನಾವು ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ. ಬದಲಾದ ಸನ್ನಿವೇಶದಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಯೋಚಿಸಬೇಕಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X