ತ್ವರಿತ ಅಲರ್ಟ್ ಗಳಿಗಾಗಿ
For Daily Alerts
76ನೇ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ?
ಡಿಸೆಂಬರ್ 18 ರಿಂದ 20ರವರೆಗೆ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಪ್ರವಾಹದಿಂದ ಗದಗ ಸೇರಿ ಉತ್ತರ ಕರ್ನಾಟಕದ ಜನ ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಹಿತ್ಯ ಸಮ್ಮೇಳನ ಸಂಬಂಧಿಸಿದ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಕಸಾಪ ಅಧ್ಯಕ್ಷ ನಲ್ಲೂರು ಪ್ರಸಾದ್, ಪ್ರವಾಹಕ್ಕೆ ಸಿಲುಕಿ ರಾಜ್ಯವೇ ಸಂಕಟದಿಂದ ನರಳುತ್ತಿರುವಾಗ ನಾವು ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ. ಬದಲಾದ ಸನ್ನಿವೇಶದಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಯೋಚಿಸಬೇಕಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
Comments
ಉತ್ತರ ಕರ್ನಾಟಕ north karnataka ಕನ್ನಡ ಸಾಹಿತ್ಯ ಪರಿಷತ್ nallur prasad gadag ಗದಗ ಕನ್ನಡ ಸಾಹಿತ್ಯ ಸಮ್ಮೇಳನ ನಲ್ಲೂರು ಪ್ರಸಾದ್ flood ಪ್ರವಾಹ
Story first published: Wednesday, October 14, 2009, 11:29 [IST]