ಹಟ್ಟಿ ಚಿನ್ನದ ಗಣಿಯಿಂದ ನೆರವು ಓಲೆ

ಸಂತ್ರಸ್ಥ ಜನರಿಗೆ ಮನೆ ನಿರ್ಮಿಸಿಕೊಡುವ ಉದ್ದೇಶದಿಂದ ಮಾನ್ವಿ ತಾಲೂಕು ಕಾತರಕಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಹಾಗೂ ಸಂತ್ರಸ್ಥರ ಭೇಟಿ ತರವಾಯು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡುತ್ತಾ ಸಂತ್ರಸ್ಥರ ನೆರವಿಗಾಗಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಹತ್ತು ಕೋಟಿ ರೂ. ನೀಡುವುದಾಗಿಯೂ ತಿಳಿಸಿದರು. ಅಗತ್ಯಬಿದ್ದರೆ ಹೆಚ್ಚಿನ ನೆರವು ಒದಗಿಸಲಾಗುವುದು ಎಂದೂ ಶಾಸಕರು ತಿಳಿಸಿದರು.
ಹಟ್ಟಿ ನಗರದ ಸಮಗ್ರ ಅಭಿವೃದ್ಧಿಗಾಗಿ ಇನ್ನೊಂದು ವಾರದಲ್ಲಿ ಹಟ್ಟಿಯಲ್ಲಿ ಕಂಪನಿಯ ಆಡಳಿಯ ಮಂಡಳಿ ಸಭೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಗಣಿ ಪ್ರದೇಶದಲ್ಲಿ ಆಡಳಿತ ಮಂಡಳಿ ಸಭೆ ನಡೆಸಲು ಉದ್ದೇಶಿಸಿದ್ದು ಗಣಿ ಪ್ರದೇಶದಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ಹಟ್ಟಿಗೆ ಮೂಲಭೂತ ಸೌಕರ್ಯ ಸೇರಿದಂತೆ ಹಲವು ಸುಧಾರಣೆಗೆ ಮಹಾತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಾನ್ವಿಯ ಕಾತರಕಿ, ತಮ್ಮಾಪುರ, ಚಿಕಲ ಪರವಿ, ಹಾಗೂ ದೇವದುರ್ಗ ಹಾಗೂ ಲಿಂಗಸ್ಗೂರ ತಾಲೂಕಿನ ನೆರೆಹಾವಳಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಾಣ ಉದ್ದೇಶ ಹೊಂದಲಾಗಿದೆ. ಈ ಕುರಿತಂತೆ ಸರಕಾರ ಜಮೀನು ಒದಗಿಸುವ ಕುರಿತಂತೆ ಜಿಲ್ಲಾ ಆಡಳಿತದೊಂದಿಗೆ ಮನೆಯ ವಿನ್ಯಾಸ ಮಾಡುವ ಎಜೆನ್ಸಿ ಕುರಿತಂತೆ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಲಾಭ ಮಾರ್ಗದಲ್ಲಿ ಗಣಿ :ಹಟ್ಟಿ ಚಿನ್ನದ ಗಣನನೀಯ ಲಾಭ ಗಳಿಸಿದೆಯಲ್ಲದೆ ಈ ವರ್ಷ ಕನಿಷ್ಠ ಒಂದು ಸಾವಿರ ಕೋಟಿ ರೂ. ಲಾಭ ಗಳಿಸುವ ನಿರೀಕ್ಷೆ ಇದೆ ಎಂದು ಈ ಸಂದರ್ಭದಲ್ಲಿ ರೇಣುಕಾಚಾರ್ಯ ಪ್ರಕಟಿಸಿದರು. 07-08 ನೆ ಸಾಲಿನಲ್ಲಿ 146.93 ಹಾಗೂ 08-09ನೇ ಸಾಲಿನಲ್ಲಿ 153.95 ಕೋಟಿ ರೂ ಲಾಭ ಗಳಿಸಿದೆ ಎಂದು ತಿಳಿಸಿದರು.
ಸಿ.ಎಂ ಗೆ ದೂರು : ಸಂತ್ರಸ್ಥರಿಗೆ ನೀಡುವ ಪರಿಹಾರದಲ್ಲಿ ಸಾಕಷ್ಟು ಲೋಪದೋಷ ಕಂಡುಬರುತ್ತಿವೆ. ಕಾತರಿಕಿಯಲ್ಲಿ ಅಧಿಕಾರಿಗಳ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಜನರಿಗೆ ವಂಜಿಸಿದ್ದಾರೆಂದು ದೂರಿದ್ದಾರೆ. 20 ಕೆ.ಜಿ ಅಕ್ಕಿ 5 ಕೆ.ಜಿ ಗೋಧಿ 1 ಕೆ.ಜಿ ಸಕ್ಕರೆ, ಬೇಳೆ, ಎಣ್ಣೆ ನೀಡುವ ಸೂಚನೆ ಇದ್ದರೂ ಕಡಿಮೆ ಪ್ರಮಾಣದಲ್ಲಿ ದವಸಧಾನ್ಯ ನೀಡುತ್ತಿದ್ದಾರೆ. ಮಾನ್ವಿ ತಾಲೂಕಿನ ಕಾತರಿಕಿಯಲ್ಲಿ ಇದನ್ನು ಸ್ವತಃ ನಾನೆ ಕಂಡಿದ್ದೇನೆ. ಈ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಸಲ್ಲಿಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರು ಬಸವನಗೌಡ ಬ್ಯಾಗವಾಡ್ ಜಿ.ಪಂ ಉಪಾಧ್ಯಕ್ಷ ದೂಡ್ಡ ಬಸವನಗೌಡ, ಮಾಜಿ ಶಾಸಕ ಗಂಗಾದರ ನಾಯಕ, ತಹಶೀಲ್ದಾರ್ ಹಾಜಿಭಾಯಿ, ನೆರೆ ಪರಿಹಾರ ಉಸ್ತುವಾರಿ ಅಧಿಕಾರಿಗಳಾದ ಜಿಲ್ಲಾ ಕಾರ್ಮಿಕಾಧಿಕಾರಿ ನಸೀರ್ ಅಹ್ಮದ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಾಂಜಿನಯ್ಯ ಸೇರಿದಂತೆ ವಿವಿಧ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
ರಾಯಚೂರು ಮತ್ತು ಚಿನ್ನದ ಗಣಿಯ ಬಗ್ಗೆ ಹೆಚ್ಚು ತಿಳಿಯಿರಿ
http://www.meraraichur.com/hutti-gold-mines.asp
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications