ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ

|
Google Oneindia Kannada News

DK Shivakumar
ಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ ಸಚಿವರು ಆರ್ಎಸ್ಎಸ್, ಬಿಜೆಪಿ ಹೆಸರಿನಲ್ಲಿ ಚೆಕ್, ಡಿಡಿ ಕೊಡುವಂತೆ ಸೂಚಿಸಿರುವುದು ಗಮನಕ್ಕೆ ಬಂದಿದೆ ಎಂದು ತರಾಟೆಗೆ ತೆಗೆದುಕೊಂಡರು.

ಸರಕಾರ ಈವರೆಗೆ ಸಂಗ್ರಹಿಸಿದ ನೆರವಿನ ಮೊತ್ತ ಎಷ್ಟು ಎಂಬುದನ್ನು ಸಾರ್ವಜನಿಕವಾಗಿ ಘೋಷಿಸಿಬೇಕು. ಒಂದು ಪೈಸೆಯೂ ಪೋಲಾಗದಂತೆ ನೋಡಿಕೊಳ್ಳಬೇಕು. ಏನಾದರೂ ಅವ್ಯವಹಾರ ನಡೆದರೆ ಕಾಂಗ್ರೆಸ್ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಅವರು ಎಚ್ಚರಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X