ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಪರಿಹಾರ ವಿತರಿಸುವಲ್ಲಿ ಪಕ್ಷ ಮತ್ತು ಜಾತಿ ರಾಜಕಾರಣ ನಡೆಯುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿಕೆ ಬಗ್ಗೆಯೂ ಕಿಡಿಕಾರಿದರು. ಇದು ಆಧಾರ ರಹಿತ ಮತ್ತು ಕಪೋಲಕಲ್ಪಿತ ಆರೋಪ ಎಂದರು. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಅನುಭವ ಕಾಂಗ್ರೆಸ್ಸಿಗರಿಗೇ ಹೆಚ್ಚಾಗಿದೆ. ಸಂತ್ರಸ್ಥರಿಗೆ ಪರಿಹಾರ ಸಿಕ್ಕಿಲ್ಲವಾದರೆ, ಶ್ರೀಮಂತರಾದ ದೇಶಪಾಂಡೆಯವರೇ ಅನುಕೂಲ ಮಾಡಿಕೊಡಲಿ ಎಂದು ಸವಾಲು ಹಾಕಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications