ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ

|
Google Oneindia Kannada News

R Ashok
ಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ.

ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ತಿರುಪತಿ, ಶಿವಮೊಗ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಬಿಜಾಪುರ, ರಾಯಚೂರು, ಗುಲ್ಬರ್ಗಾ, ಬಳ್ಳಾರಿಗೆ ವಿಶೇಷ ಬಸ್ ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಸಂಚರಿಸಲಿವೆ.

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಸಂಚರಿಸುವ ಬಸ್ಸುಗಳು ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ ಹೊರಡಲಿವೆ. ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ಇತರೆ ಪ್ರದೇಶಗಳಿಗೆ ತೆರಳುವ ಬಸ್ಸುಗಳು(ವೋಲ್ವೋ ಹೊರತುಪಡಿಸಿ) ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X