ಜೈನಕಾಶಿಯಲ್ಲಿ ನುಡಿಸಿರಿಯ ಸಂಭ್ರಮ

* ಚಿದಂಬರ ಬೈಕಂಪಾಡಿ, ಮಂಗಳೂರು
ಜೈನಕಾಶಿ ಮೂಡುಬಿದಿರೆ ಆಳ್ವಾಸ್ ನುಡಿಸಿರಿ 2009ಕ್ಕೆ ಸಜ್ಜುಗೊಳ್ಳುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ಇದಾಗಿದ್ದು ನವೆಂಬರ್ 6ರಿಂದ 8ರವರೆಗೆ ಮೂಡುಬಿದಿರೆಯಲ್ಲಿರುವ ವಿದ್ಯಾಗಿರಿಯಲ್ಲಿ ನಡೆಯಲಿದೆ. ಕನ್ನಡದ ಹಿರಿಯ ಸಾಹಿತಿ ಡಾ.ಹಂಪನಾ ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೇನೂ ಕಡಮೆ ಅಲ್ಲ ಎನ್ನುವ ರೀತಿಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತದೆ. ಆದ್ದರಿಂದಲೇ ಈ ಸಮ್ಮೇಳನಕ್ಕೆ ನಾಡಿನ ಮೂಲೆ ಮೂಲೆಯಿಂದ ಸಾಹಿತ್ಯಾಸಕ್ತರು ಬರುತ್ತಾರೆ. ಈ ಬಾರಿಯ ಸಮ್ಮೇಳನದಲ್ಲಿ ಕನ್ನಡ ಮನಸ್ಸು : ಸಮನ್ವಯದೆಡೆಗೆ' ಎನ್ನುವ ವಿಷಯವನ್ನು ಆಯ್ಕೆಮಾಡಿದೆ. ಮೂರೂ ದಿನಗಳ ಕಾಲ ಜರಗುವ ಈ ಸಮ್ಮೇಳನದಲ್ಲಿ ನಾಡಿನ ಪ್ರಮುಖ ವಿದ್ವಾಂಸರು ಪ್ರಬಂಧ ಮಂಡನೆ ಮಾಡಲಿದ್ದು ಅರ್ಥಪೂರ್ಣ ಚರ್ಚೆಗಳಾಗುತ್ತವೆ.
ಮೂಡಬಿದಿರೆಯಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರು ಸ್ವಂತ ನೆಲೆಯಲ್ಲಿ ನುಡಿಸಿರಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆಕೊಟ್ಟರು, ಇದು ಆರನೇ ವರ್ಷದ ನುಡಿಸಿರಿ. ನಿತ್ಯವೂ ಇಲ್ಲಿ ಬರೇ ಭಾಷಣ ಅಂದುಕೊಳ್ಳಬೇಡಿ. ಕವಿಸಮಯ ಕವಿನಮನ, ಹಾಸ್ಯಗೋಷ್ಠಿ ಜೊತೆಗೆ ಭರಪೂರ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಂಡು ಕನ್ನಡ ಮನಸ್ಸುಗಳು ಚರ್ಚೆ ಮಾಡುವುದು ಇಲ್ಲಿನ ವಿಶೇಷ.
ಈ ಸಮ್ಮೇಳನದಲ್ಲಿ ಭಾಗವಹಿಸುವವರು ಮುಂಚಿತವಾಗಿ 100 ರೂಪಾಯಿ ಪ್ರತಿನಿಧಿ ಶುಲ್ಕಕೊಟ್ಟು ಹೆಸರು ನೋಂದಾಯಿಸಬೇಕು. ಉಚಿತ ವಸತಿ, ಊಟ ಕೊಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರವೇಶವೂ ಉಚಿತ. ಅತ್ಯಂತ ಅಚ್ಚುಕಟ್ಟಾಗಿ ಜರಗುವ ಈ ಸಮ್ಮೇಳನದಲ್ಲಿ ನಾಡಿನಾದ್ಯಂತ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಒಂದು ಸಂಘಟನೆ ಮಾಡಬೇಕಾದ ಕನ್ನಡಕಟ್ಟುವ ಕೆಲಸವನ್ನು ಮೋಹನ್ ಆಳ್ವರು ಒಬ್ಬಂಟಿಯಾಗಿ ಮಾಡುತ್ತಿದ್ದಾರೆ. ಸ್ವತ: ವೈದ್ಯರಾಗಿರುವ ಆಳ್ವರು ಜನಪದ ಕಲೆ, ಸಂಸ್ಕೃತಿಯ ವಿಚಾರದಲ್ಲಿ ಗಟ್ಟಿಗರು. ಭರತನಾಟ್ಯ ಕಲಾವಿದರೂ ಆಗಿರುವ ಆಳ್ವರು ಗೆಜ್ಜೆಕಟ್ಟಿ ನುಡಿಸಿರಿಯಲ್ಲಿ ಕುಣಿಯುತ್ತಾರೆ. ಮಧ್ಯಮ ವಯಸ್ಸಿನಲ್ಲೂ ಆಳ್ವರು ನರ್ತಿಸುವುದನ್ನು ಕಂಡು ಅನುಭವಿಸಬೇಕು. ಒಂದು ರೀತಿಯಲ್ಲಿ ಮೋಹನ್ ಆಳ್ವರು ತುಳುನಾಡಿನ ಸಾಂಸ್ಕೃತಿಕ ರಾಯಬಾರಿಯೂ ಹೌದು. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಬೆಳೆಸಿದ ಮೋಹನ್ ಆಳ್ವರು ನುಡಿಸಿರಿಯ ಮೂಲಕ ಕನ್ನಡದ ಮನಸ್ಸುಗಳನ್ನು ಕಟ್ಟುತ್ತಿದ್ದಾರೆ ನುಡಿಸಿರಿಯ ಮೂಲಕ. ಹೆಚ್ಚಿನ ಮಾಹಿತಿ ಬೇಕಾದರೆ http://alvasnudisiri.blogspot.com ಅಂತರ್ಜಾಲ ಪ್ರವೇಶಿಸಿ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications