ಜೈನಕಾಶಿಯಲ್ಲಿ ನುಡಿಸಿರಿಯ ಸಂಭ್ರಮ

* ಚಿದಂಬರ ಬೈಕಂಪಾಡಿ, ಮಂಗಳೂರು
ಜೈನಕಾಶಿ ಮೂಡುಬಿದಿರೆ ಆಳ್ವಾಸ್ ನುಡಿಸಿರಿ 2009ಕ್ಕೆ ಸಜ್ಜುಗೊಳ್ಳುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ಇದಾಗಿದ್ದು ನವೆಂಬರ್ 6ರಿಂದ 8ರವರೆಗೆ ಮೂಡುಬಿದಿರೆಯಲ್ಲಿರುವ ವಿದ್ಯಾಗಿರಿಯಲ್ಲಿ ನಡೆಯಲಿದೆ. ಕನ್ನಡದ ಹಿರಿಯ ಸಾಹಿತಿ ಡಾ.ಹಂಪನಾ ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೇನೂ ಕಡಮೆ ಅಲ್ಲ ಎನ್ನುವ ರೀತಿಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತದೆ. ಆದ್ದರಿಂದಲೇ ಈ ಸಮ್ಮೇಳನಕ್ಕೆ ನಾಡಿನ ಮೂಲೆ ಮೂಲೆಯಿಂದ ಸಾಹಿತ್ಯಾಸಕ್ತರು ಬರುತ್ತಾರೆ. ಈ ಬಾರಿಯ ಸಮ್ಮೇಳನದಲ್ಲಿ ಕನ್ನಡ ಮನಸ್ಸು : ಸಮನ್ವಯದೆಡೆಗೆ' ಎನ್ನುವ ವಿಷಯವನ್ನು ಆಯ್ಕೆಮಾಡಿದೆ. ಮೂರೂ ದಿನಗಳ ಕಾಲ ಜರಗುವ ಈ ಸಮ್ಮೇಳನದಲ್ಲಿ ನಾಡಿನ ಪ್ರಮುಖ ವಿದ್ವಾಂಸರು ಪ್ರಬಂಧ ಮಂಡನೆ ಮಾಡಲಿದ್ದು ಅರ್ಥಪೂರ್ಣ ಚರ್ಚೆಗಳಾಗುತ್ತವೆ.
ಮೂಡಬಿದಿರೆಯಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರು ಸ್ವಂತ ನೆಲೆಯಲ್ಲಿ ನುಡಿಸಿರಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆಕೊಟ್ಟರು, ಇದು ಆರನೇ ವರ್ಷದ ನುಡಿಸಿರಿ. ನಿತ್ಯವೂ ಇಲ್ಲಿ ಬರೇ ಭಾಷಣ ಅಂದುಕೊಳ್ಳಬೇಡಿ. ಕವಿಸಮಯ ಕವಿನಮನ, ಹಾಸ್ಯಗೋಷ್ಠಿ ಜೊತೆಗೆ ಭರಪೂರ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಂಡು ಕನ್ನಡ ಮನಸ್ಸುಗಳು ಚರ್ಚೆ ಮಾಡುವುದು ಇಲ್ಲಿನ ವಿಶೇಷ.
ಈ ಸಮ್ಮೇಳನದಲ್ಲಿ ಭಾಗವಹಿಸುವವರು ಮುಂಚಿತವಾಗಿ 100 ರೂಪಾಯಿ ಪ್ರತಿನಿಧಿ ಶುಲ್ಕಕೊಟ್ಟು ಹೆಸರು ನೋಂದಾಯಿಸಬೇಕು. ಉಚಿತ ವಸತಿ, ಊಟ ಕೊಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರವೇಶವೂ ಉಚಿತ. ಅತ್ಯಂತ ಅಚ್ಚುಕಟ್ಟಾಗಿ ಜರಗುವ ಈ ಸಮ್ಮೇಳನದಲ್ಲಿ ನಾಡಿನಾದ್ಯಂತ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಒಂದು ಸಂಘಟನೆ ಮಾಡಬೇಕಾದ ಕನ್ನಡಕಟ್ಟುವ ಕೆಲಸವನ್ನು ಮೋಹನ್ ಆಳ್ವರು ಒಬ್ಬಂಟಿಯಾಗಿ ಮಾಡುತ್ತಿದ್ದಾರೆ. ಸ್ವತ: ವೈದ್ಯರಾಗಿರುವ ಆಳ್ವರು ಜನಪದ ಕಲೆ, ಸಂಸ್ಕೃತಿಯ ವಿಚಾರದಲ್ಲಿ ಗಟ್ಟಿಗರು. ಭರತನಾಟ್ಯ ಕಲಾವಿದರೂ ಆಗಿರುವ ಆಳ್ವರು ಗೆಜ್ಜೆಕಟ್ಟಿ ನುಡಿಸಿರಿಯಲ್ಲಿ ಕುಣಿಯುತ್ತಾರೆ. ಮಧ್ಯಮ ವಯಸ್ಸಿನಲ್ಲೂ ಆಳ್ವರು ನರ್ತಿಸುವುದನ್ನು ಕಂಡು ಅನುಭವಿಸಬೇಕು. ಒಂದು ರೀತಿಯಲ್ಲಿ ಮೋಹನ್ ಆಳ್ವರು ತುಳುನಾಡಿನ ಸಾಂಸ್ಕೃತಿಕ ರಾಯಬಾರಿಯೂ ಹೌದು. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಬೆಳೆಸಿದ ಮೋಹನ್ ಆಳ್ವರು ನುಡಿಸಿರಿಯ ಮೂಲಕ ಕನ್ನಡದ ಮನಸ್ಸುಗಳನ್ನು ಕಟ್ಟುತ್ತಿದ್ದಾರೆ ನುಡಿಸಿರಿಯ ಮೂಲಕ. ಹೆಚ್ಚಿನ ಮಾಹಿತಿ ಬೇಕಾದರೆ http://alvasnudisiri.blogspot.com ಅಂತರ್ಜಾಲ ಪ್ರವೇಶಿಸಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications