ಶಹನವಾಜ್ ಹುಸೇನ್ಗೆ ದಕ್ಕಿತು ವೀಸಾ!

ಹುಸೇನ್ ಅವರ ವೀಸಾ ಪ್ರಸಂಗದ ಬಗ್ಗೆ ತಿಳಿದಬಿಜೆಪಿಯ ಹಿರಿಯ ಮುಖಂಡಎಲ್ ಕೆ ಅಡ್ವಾಣಿ ಆವರು ನಿನ್ನೆ ಪ್ರಧಾನಿ ಮನಮೋಹನ್ ಸಿಂಗ್ ಅವರೊಡನೆ ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಮೆರಿಕ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಕೂಡಲೇ ವೀಸಾ ದೊರೆಯುವಂತೆ ಮಾಡಿದ್ದಾರೆ ಎನ್ನಲಾಗಿದೆ.
"ಅಕ್ಟೋಬರ್ 20ರಿಂದ 31ರವರೆಗೆ ನಡೆಯುವ ಅಧಿವೇಶನದಲ್ಲಿ ಭಾಗವಹಿಸುವ ನಿಯೋಗದಲ್ಲಿ ನಾನೂ ಸದಸ್ಯನಾಗಿದ್ದೆ. ವಿದೇಶ ವ್ಯವಹಾರ ಸಚಿವಾ
ಲಯ ವೀಸಾಗಳಿಗೆ ಅರ್ಜಿ ಸಲ್ಲಿಸಿತ್ತು. ನಿಯೋಗದ ಇತರ ನಾಲ್ವರು ಸದಸ್ಯರಿಗೆ ವೀಸಾ ಲಭಿಸಿದ್ದು, ಅವರು ಸೋಮವಾರ ರಾತ್ರಿ ಪ್ರಯಾಣಿಸುತ್ತಿದ್ದಾರೆ. ಆಡಳಿತಾ ತ್ಮಕ ಪ್ರಕ್ರಿಯೆಯಿಂದ ನನಗೆ ವೀಸಾ ಲಭಿಸುವುದು ವಿಳಂಬವಾಗಿದೆ" ಎಂದು ಹುಸೇನ್ ತಿಳಿಸಿದ್ದಾರೆ.
ನ್ಯೂಯಾರ್ಕ್ ಗೆ ಹೊರಟಿರುವ ನಿಯೋಗದಲ್ಲಿ ಕಾಂಗ್ರೆಸ್ಸಿನ ಗಿರಿಜಾ ವ್ಯಾಸ್, ಸಂಜಯ್ ನಿರುಪಮ್, ಜೆಡಿಯುನ ಅಲಿ ಅನ್ವರ್ ಹಾಗೂ ಡಿಎಂಕೆಯ ಟಿಕೆಎಸ್ ಇಳಂಗೋವನ್ ಇದ್ದಾರೆ.ಕೇಂದ್ರದ ಕಲ್ಲಿದ್ದಲು ಖಾತೆ ಸಚಿವ, ನಾಗರೀಕ ವಿಮಾನಯಾನ ಸಚಿವ ಹಾಗೂ ಜವಳಿ ಖಾತೆ ಸಚಿವನಾಗಿದ್ದಾಗ ನ್ಯೂಯಾರ್ಕ್ ಗೆ ಭೇಟಿ ಕೊಟ್ಟಿದ್ದೆ. ಆದರೆ, ಈಗ ವಿಳಂಬಕ್ಕೆ ಕಾರಣ ತಿಳಿಯುತ್ತಿಲ್ಲ ಎಂದು ಹುಸೇನ್ ಹೇಳಿದ್ದಾರೆ.
ಈ ಮುಂಚೆ ಬಾಲಿವುಡ್ ನಟ ಶಾರುಖ್ ಖಾನ್ ಅವರು ಅಮೆರಿಕ ಭೇಟಿ ಸಂದರ್ಭದಲ್ಲಿ ತೀವ್ರವಾದ ತಪಾಸಣೆ ನಡೆಸಿ, ಮುಜುಗರಕ್ಕೀಡುಮಾಡಿದ ಘಟನೆ ನಡೆದಿತ್ತು. ಇತ್ತೀಚೆಗೆ ಸಾಕರ್ ಆಟಗಾರ ಡೇವಿಡ್ ಬೇಕಮ್ ಕೂಡ ಈ ರೀತಿಯ ತೊಂದರೆ ಅನುಭವಿಸಿದ್ದರು.
(ಏಜೆನ್ಸೀಸ್)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications