Get Updates
Get notified of breaking news, exclusive insights, and must-see stories!

ಪ್ರವಾಹ ನಿಧಿಗೆ ಐಟಿ ದೇಣಿಗೆ ಸಭೆ

Rajeev Chandrashekar
ಬೆಂಗಳೂರು, ಅ. 21: ಬೆಂಗಳೂರಿನ ಐಟಿ ಬಿಟಿ ಇಟೇಸ್ ಕಾರ್ಪೋರೇಟ್ ಕಚೇರಿಗಳಿಂದ ನೆರೆ ಪರಿಹಾರಕ್ಕೆ ದೇಣಿಗೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಅ 22 ರಂದು ನಗರದಲ್ಲಿ ಮಹತ್ವದ ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಕಾರ್ಪೋರೇಟ್ ಕಚೇರಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಐಟಿ ಬಿಟಿ ನೌಕರರು ಮತ್ತು ಆಡಳಿತ ವರ್ಗ ಯಾವ ರೀತಿಯಲ್ಲಿ ನೆರವಿನ ಹಸ್ತ ಚಾಚಬಹುದು ಎಂಬ ಬಗ್ಗೆ ಈ ಸಭೆಯಲ್ಲಿ ಆಮೂಲಾಗ್ರವಾಗಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಭಾಗವಹಿಸುತ್ತಿದ್ದಾರೆ. ನೆರಾಹಾವಳಿಗೆ ತುತ್ತಾದ ಪ್ರದೇಶಗಳಲ್ಲಿ ಮನೆ ನಿರ್ಮಿಸುವ ಯೋಜನೆಯಲ್ಲಿ ( ಆಸರೆ ) ಖಾಸಗಿ ವಲಯದವರನ್ನು ತೊಡಗಿಸುವ ನಿಟ್ಟಿನಲ್ಲಿ ಅವರು ಕಾರ್ಯೋನ್ಮುಖವಾಗಿದ್ದಾರೆ.

ಖಾಸಗಿ ಅಂದರೆ ಐಟಿ ವಲಯದ ಕಾಣಿಕೆಗಳಿಂದ ಸುಮಾರು 3,000 ಮನೆ, ಎರಡು ಶಾಲೆ. ಎರಡು ಆಸ್ಪತ್ರೆ ನಿರ್ಮಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ. ಈ ಸಭೆಯಲ್ಲಿ ಕಾರ್ಪೋರೇಟ್ ಕಂಪನಿಗಳು ತಮ್ಮ ಕೊಡುಗೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.

(ದಟ್ಸ್ ಕನ್ನಡ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+