ಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ

ರಣಕಹಳೆ..
ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ.
* ಚೀನಾವು ಪಾಕ್ಗೆ ಲಾಗಾಯ್ತಿನಿಂದಲೂ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದೆ.
* ಪಾಕಿಸ್ತಾನವು ಶ್ರೀಲಂಕಾಕ್ಕೆ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದೆ.
ಈ ಎಲ್ಲ ಆಗುಹೋಗುಗಳನ್ನೂ ಭಾರತವು ಕ್ಷ-ಕಿರಣದ ಕಣ್ಣುಗಳಿಂದ ನೋಡಬೇಕಾದುದು ಭಾರತದ ರಕ್ಷಣೆಯ ದೃಷ್ಟಿಯಿಂದ ಇಂದು ಅನಿವಾರ್ಯ. ಭಾರತಕ್ಕೆ ಚೀನಾದಿಂದ ಎದುರಾಗಲಿರುವ ಅಪಾಯದ ಬಗ್ಗೆ ಜಾರ್ಜ್ ಫರ್ನಾಂಡಿಸ್ ಅವರು ಭಾರತದ ರಕ್ಷಣಾ ಮಂತ್ರಿಯ ಕುರ್ಚಿಯಿಂದಲೇ ಎಚ್ಚರಿಸಿದ್ದರು. ಇದೀಗ ಆ ಅಪಾಯ ಸಮೀಪಿಸುತ್ತಿರುವಂತಿದೆ. ಭಾರತ ಎಚ್ಚತ್ತುಕೊಳ್ಳಬೇಕು.
ಯುದ್ಧ ಬೇಡ
ಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. ವಿವಿಧ ದೇಶಗಳ ಸಹಮತಕ್ಕಾಗಿ ಭಾರತವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಯತ್ನವನ್ನು ಮಾಡಬೇಕು ಮತ್ತು ವಿವಿಧ ದೇಶಗಳ ಬೆಂಬಲಕ್ಕಾಗಿ ಸೂಕ್ತ ಲಾಬಿ ನಡೆಸುವ ಯೋಜನೆ ಹಾಕಿಕೊಳ್ಳಬೇಕು.
ಇಷ್ಟಾಗಿಯೂ ಯುದ್ಧ ತಪ್ಪದು ಎಂದರೆ, ಜೈ! ನಾವು ಜಯಿಸಿಯೇ ಸೈ!
ಭಾಗ : « 1 2 3
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications