ಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ ಮತದಾರರ ಬೆಂಬಲಿಸಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಕೈಗೊಂಡ ಕಾರ್ಯಗಳಿಂದ ಮತದಾರರರು ಕಾಂಗ್ರೆಸ್ ಮತ ನೀಡಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಜನಪರ ಸರಕಾರ ಎನ್ನುವುದಕ್ಕೆ ಈ ಚುನಾವಣೆಯ ಫಲಿತಾಂಶವೇ ಉತ್ತರ ಎಂದು ಪವಾರ್ ಹೇಳಿದರು.
ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಪಕ್ಷಗಳು ಉತ್ತಮ ಪ್ರದರ್ಶನ ನೀಡಿವೆ. ನಮ್ಮ ನಿರೀಕ್ಷೆಗೂ ಮೀರಿ ಗ್ರಾಮೀಣ ಜನತೆ ನಮಗೆ ಬೆಂಬಲಿಸಿದ್ದಾರೆ. ಕೇಂದ್ರ ಸರಕಾರದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗೆಲುವಿಗೆ ಪ್ರಮುಖ ಕಾರಣ ಎಂದು ಪವಾರ್ ಅಭಿಪ್ರಾಯಪಟ್ಟರು. ಇತ್ತೀಚಿನ ವರದಿಗಳು ಬಂದಾಗ 134 ಕಾಂಗ್ರೆಸ್ ಎನ್ ಸಿಪಿ, ಬಿಜೆಪಿ ಶಿವಸೇನೆ 100, ಎಂಎನ್ಎಸ್ 14, ಇತರರು 33 ಕ್ಷೇತ್ರಗಳಲ್ಲಿ ಮುನ್ನೆಡೆ ಗಳಿಸಿದ್ದಾರೆ. ಹರಿಯಾಣದಲ್ಲಿ 44 ಕಾಂಗ್ರೆಸ್, ಐಎನ್ಎಲ್ಡಿ 28, ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನೆಡೆ ಗಳಿಸಿದೆ. ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಂಡ ಜಯಗಳಿಸುವ ಹಾದಿಯಲ್ಲಿದೆ.
(ಏಜನ್ಸೀಸ್)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications