ರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ

ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ಗೆ 10.52 ಕೋಟಿ ರೂ.ವೆಚ್ಚವಾಗಲಿದೆ. ಅನೇಕ ತಿಂಗಳ ಕಾಲ ಅನೇಕ ತಜ್ಞರ ಜೊತೆ ನಡೆಸಿದ ಸಮಾಲೋಚನೆಯ ನಂತರ ಈ ಕಾರಿಡಾರ್ ನ ನೀಲನಕ್ಷೆ ಸಿದ್ಧವಾಗಿದೆ. ಈ ಯೋಜನೆಯಡಿ ಮೊದಲ ಹಂತದಲ್ಲಿ ಡಾ ರಾಜ್ಕುಮಾರ್ ರಸ್ತೆ ಒಳಗೊಂಡಂತೆ ಯಶವಂತಪುರದಿಂದ ಓಕಳಿಪುರಂ ಜಂಕ್ಷನ್ವರೆಗೆ ಸಿಗ್ನಲ್ ರಹಿತ ಸಂಚಾರ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.
ಇದಕ್ಕಾಗಿ ವಿವೇಕಾನಂದ ಕಾಲೇಜ್ ಜಂಕ್ಷನ್, 10ನೇ ಅಡ್ಡರಸ್ತೆ ಜಂಕ್ಷನ್, ನವರಂಗ್ ಜಂಕ್ಷನ್, ಬ್ರಿಡ್ಜ್ ಸ್ಟೋನ್ ಜಂಕ್ಷನ್, 3ನೇ ಬ್ಲಾಕ್ ಜಂಕ್ಷನ್, ಓಕಳಿಪುರಂ ಜಂಕ್ಷನ್ ಮುಂತಾದ 6 ಕಡೆಗಳಲ್ಲಿ ಅಂಡರ್ ಪಾಸ್ಗಳನ್ನು ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದರು.
ಈ ಯೋಜನೆಯ ಒಟ್ಟು ಅಂದಾಜು ಮೊತ್ತ 125 ಕೋಟಿ ರೂಪಾಯಿಗಳಾಗಿವೆ. ಈ 6 ಜಂಕ್ಷನ್ಗಳಲ್ಲಿ ಮೊದಲ ಹಂತದಲ್ಲಿ ವಿವೇಕಾನಂದ ಕಾಲೇಜ್ ಜಂಕ್ಷನ್, 10ನೇ ಅಡ್ಡರಸ್ತೆ ಹಾಗೂ ಓಕಳಿಪುರಂ ಜಂಕ್ಷನ್ಗಳಲ್ಲಿ 3 ಅಂಡರ್ಪಾಸ್ಗಳನ್ನು ನಿರ್ಮಿಸಲಾಗುತ್ತದೆ. ವಿವೇಕಾನಂದ ಕಾಲೇಜ್ ಜಂಕ್ಷನ್ ಅಂಡರ್ಪಾಸ್ ನಿರ್ಮಾಣಕ್ಕೆ 7.71 ಕೋಟಿ ರುಪಾಯಿ, 10ನೇ ಅಡ್ಡರಸ್ತೆ ಅಂಡರ್ ಪಾಸ್ಗೆ 1346,50 ಲಕ್ಷ ಹಾಗೂ ಓಕಳಿಪುರಂ ಜಂಕ್ಷನ್ನ ಅಂಡರ್ಪಾಸ್ಗೆ 1052.40 ಲಕ್ಷ ವೆಚ್ಚ ಅಂದಾಜು ಮಾಡಲಾಗಿದೆ. ಉಳಿದ 3 ಅಂಡರ್ಪಾಸ್ಗಳನ್ನು ಎರಡನೇ ಹಂತದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಾಗಿ ತಮಗೆ ಸೇರಿದ 3.5 ಎಕರೆ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ. ಜನೋಪಯೋಗಿ ಕೆಲಸಗಳಲ್ಲಿ ಹೀಗೆ ಪಕ್ಷಭೇದ ಮರೆತು ಸಹಕಾರ ನೀಡಿದಾಗ ಪ್ರಗತಿ ಸಾಧ್ಯ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದರು.
ಪ್ರಯಾಣಕರಿಗೆ ಪರ್ಯಾಯ ಮಾರ್ಗ : ಈ ಕಾರಿಡಾರ್ ನಿರ್ಮಾಣ ಸಮಯದಲ್ಲಿ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಪರ್ಯಾಯ ಮಾರ್ಗಗಳನ್ನು ಈಗಾಗಲೇ ಯೋಜಿಸಲಾಗಿದೆ. ಮಾಗಡಿ ರಸ್ತೆಯಿಂದ ರಾಜಾಜಿನಗರಕ್ಕೆ ನೇರವಾದ ಪರ್ಯಾಯ ಮಾರ್ಗ ನಿರ್ಮಿಸಲಾಗುವುದು, ಅದರ ವಿವರಗಳನ್ನು ಬಿ.ಬಿ.ಎಂ.ಪಿ ಪ್ರಕಟಿಸಲಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications