ರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ

ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ಗೆ 10.52 ಕೋಟಿ ರೂ.ವೆಚ್ಚವಾಗಲಿದೆ. ಅನೇಕ ತಿಂಗಳ ಕಾಲ ಅನೇಕ ತಜ್ಞರ ಜೊತೆ ನಡೆಸಿದ ಸಮಾಲೋಚನೆಯ ನಂತರ ಈ ಕಾರಿಡಾರ್ ನ ನೀಲನಕ್ಷೆ ಸಿದ್ಧವಾಗಿದೆ. ಈ ಯೋಜನೆಯಡಿ ಮೊದಲ ಹಂತದಲ್ಲಿ ಡಾ ರಾಜ್ಕುಮಾರ್ ರಸ್ತೆ ಒಳಗೊಂಡಂತೆ ಯಶವಂತಪುರದಿಂದ ಓಕಳಿಪುರಂ ಜಂಕ್ಷನ್ವರೆಗೆ ಸಿಗ್ನಲ್ ರಹಿತ ಸಂಚಾರ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.
ಇದಕ್ಕಾಗಿ ವಿವೇಕಾನಂದ ಕಾಲೇಜ್ ಜಂಕ್ಷನ್, 10ನೇ ಅಡ್ಡರಸ್ತೆ ಜಂಕ್ಷನ್, ನವರಂಗ್ ಜಂಕ್ಷನ್, ಬ್ರಿಡ್ಜ್ ಸ್ಟೋನ್ ಜಂಕ್ಷನ್, 3ನೇ ಬ್ಲಾಕ್ ಜಂಕ್ಷನ್, ಓಕಳಿಪುರಂ ಜಂಕ್ಷನ್ ಮುಂತಾದ 6 ಕಡೆಗಳಲ್ಲಿ ಅಂಡರ್ ಪಾಸ್ಗಳನ್ನು ನಿರ್ಮಾಣ ಮಾಡಲು ಯೋಜನೆ ಸಿದ್ಧವಾಗಿದೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದರು.
ಈ ಯೋಜನೆಯ ಒಟ್ಟು ಅಂದಾಜು ಮೊತ್ತ 125 ಕೋಟಿ ರೂಪಾಯಿಗಳಾಗಿವೆ. ಈ 6 ಜಂಕ್ಷನ್ಗಳಲ್ಲಿ ಮೊದಲ ಹಂತದಲ್ಲಿ ವಿವೇಕಾನಂದ ಕಾಲೇಜ್ ಜಂಕ್ಷನ್, 10ನೇ ಅಡ್ಡರಸ್ತೆ ಹಾಗೂ ಓಕಳಿಪುರಂ ಜಂಕ್ಷನ್ಗಳಲ್ಲಿ 3 ಅಂಡರ್ಪಾಸ್ಗಳನ್ನು ನಿರ್ಮಿಸಲಾಗುತ್ತದೆ. ವಿವೇಕಾನಂದ ಕಾಲೇಜ್ ಜಂಕ್ಷನ್ ಅಂಡರ್ಪಾಸ್ ನಿರ್ಮಾಣಕ್ಕೆ 7.71 ಕೋಟಿ ರುಪಾಯಿ, 10ನೇ ಅಡ್ಡರಸ್ತೆ ಅಂಡರ್ ಪಾಸ್ಗೆ 1346,50 ಲಕ್ಷ ಹಾಗೂ ಓಕಳಿಪುರಂ ಜಂಕ್ಷನ್ನ ಅಂಡರ್ಪಾಸ್ಗೆ 1052.40 ಲಕ್ಷ ವೆಚ್ಚ ಅಂದಾಜು ಮಾಡಲಾಗಿದೆ. ಉಳಿದ 3 ಅಂಡರ್ಪಾಸ್ಗಳನ್ನು ಎರಡನೇ ಹಂತದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಾಗಿ ತಮಗೆ ಸೇರಿದ 3.5 ಎಕರೆ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ. ಜನೋಪಯೋಗಿ ಕೆಲಸಗಳಲ್ಲಿ ಹೀಗೆ ಪಕ್ಷಭೇದ ಮರೆತು ಸಹಕಾರ ನೀಡಿದಾಗ ಪ್ರಗತಿ ಸಾಧ್ಯ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದರು.
ಪ್ರಯಾಣಕರಿಗೆ ಪರ್ಯಾಯ ಮಾರ್ಗ : ಈ ಕಾರಿಡಾರ್ ನಿರ್ಮಾಣ ಸಮಯದಲ್ಲಿ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಪರ್ಯಾಯ ಮಾರ್ಗಗಳನ್ನು ಈಗಾಗಲೇ ಯೋಜಿಸಲಾಗಿದೆ. ಮಾಗಡಿ ರಸ್ತೆಯಿಂದ ರಾಜಾಜಿನಗರಕ್ಕೆ ನೇರವಾದ ಪರ್ಯಾಯ ಮಾರ್ಗ ನಿರ್ಮಿಸಲಾಗುವುದು, ಅದರ ವಿವರಗಳನ್ನು ಬಿ.ಬಿ.ಎಂ.ಪಿ ಪ್ರಕಟಿಸಲಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications