ನೆರೆ : ಸಿಸ್ಕೋ ಆಸರೆ ಯೋಜನೆಗೆ ಚಾಲನೆ

ಈ ಯೋಜನೆಯಡಿ ಮುಂದಿನ 6 ರಿಂದ 8 ತಿಂಗಳಲ್ಲಿ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಗುರುವಾರ ನಡೆದ ವಿವಿಧ ಕಂಪನಿಗಳು ಹಾಗೂ ಉದ್ಯಮ ಪ್ರತಿನಿಧಿಗಳ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಇದಕ್ಕೂ ಮುನ್ನ ಉದ್ಯಮಿಗಳ ಸಭೆ ಮಾತನಾಡಿದ ಮುಖ್ಯಮಂತ್ರಿಗಳು, ನೆರೆ ಸಂತ್ರಸ್ಥರ ಪುನರ್ವಸತಿಗೆ ಕಾರ್ಯಕ್ಕೆ ದೇಣಿಗೆ ನೀಡಬೇಕು. ಇಲ್ಲವೇ ಇಂತಿಷ್ಟು ಮನೆ ನಿರ್ಮಿಸಿಕೊಡಬೇಕು ಎಂಬ ಒತ್ತಾಯವನ್ನು ಸರಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮನೆ ಕಟ್ಟಿಕೊಡಲು ಮುಂದೆ ಬಂದಿರುವವರಿಗೆ ಒಂದು ವಾರದಲ್ಲಿ ಗ್ರಾಮಗಳನ್ನು ವಹಿಸಿಕೊಡಲಾಗುವುದು. ಮನೆಗಳ ನಿರ್ಮಾಣಕ್ಕೆ ಅಗತ್ಯ ಭೂಮಿಯನ್ನು ಸರಕಾರ ನೀಡಲಿದೆ. ನಿರ್ದಿಷ್ಟ ಮಾದರಿಯಲ್ಲಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಉದ್ಯಮಿಗಳು ಕಾರ್ಯ ಆರಂಭಿಸಬಹುದು ಎಂದು ಯಡಿಯೂರಪ್ಪ ವಿವರಿಸಿದರು.
ಸಿಸ್ಕೋ ನೆರವು
ರಾಯಚೂರು ಜಿಲ್ಲೆಯಲ್ಲಿ 50 ಕೋಟಿ ರುಪಾಯಿ ವೆಚ್ಚದಲ್ಲಿ ಒಟ್ಟು ನಾಲ್ಕು ಸಾವಿರ ಮನೆಗಳನ್ನು ನಿರ್ಮಿಸುವ ಒಡಂಬಡಿಕೆ ಪತ್ರಕ್ಕೆ ಸಿಸ್ಕೋ ಸಂಸ್ಥೆಯ ಉಪಾಧ್ಯಕ್ಷ ಅರವಿಂದ ಸೀತಾರಾಮ್ ಮತ್ತು ನೆರೆ ಪರಿಹಾರ ಕಾರ್ಯಕ್ರಮಗಳ ಅನುಷ್ಟಾನದ ನೋಡಲ್ ಅಧಿಕಾರಿ ಜಾಮದಾರ್ ಸಹಿ ಹಾಕಿದರು. ಮನೆ ಕಟ್ಟಿಕೊಡುವ ಹಳ್ಳಿಯನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸುವ ಮತ್ತು ರಾಯಚೂರು ಜಿಲ್ಲೆಯಲ್ಲಿ ಎರಡು ಅತ್ಯಾಧುನಿಕ ಶಾಲೆ ಮತ್ತು ಒಂದು ಆಸ್ಪತ್ರೆಯನ್ನು ನಿರ್ಮಿಸಿಕೊಡಲು ಸಿಸ್ಕೋ ಕಂಪನಿ ನಿರ್ಧರಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications