ನೆರೆ : ಸಿಸ್ಕೋ ಆಸರೆ ಯೋಜನೆಗೆ ಚಾಲನೆ

ಈ ಯೋಜನೆಯಡಿ ಮುಂದಿನ 6 ರಿಂದ 8 ತಿಂಗಳಲ್ಲಿ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಗುರುವಾರ ನಡೆದ ವಿವಿಧ ಕಂಪನಿಗಳು ಹಾಗೂ ಉದ್ಯಮ ಪ್ರತಿನಿಧಿಗಳ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಇದಕ್ಕೂ ಮುನ್ನ ಉದ್ಯಮಿಗಳ ಸಭೆ ಮಾತನಾಡಿದ ಮುಖ್ಯಮಂತ್ರಿಗಳು, ನೆರೆ ಸಂತ್ರಸ್ಥರ ಪುನರ್ವಸತಿಗೆ ಕಾರ್ಯಕ್ಕೆ ದೇಣಿಗೆ ನೀಡಬೇಕು. ಇಲ್ಲವೇ ಇಂತಿಷ್ಟು ಮನೆ ನಿರ್ಮಿಸಿಕೊಡಬೇಕು ಎಂಬ ಒತ್ತಾಯವನ್ನು ಸರಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮನೆ ಕಟ್ಟಿಕೊಡಲು ಮುಂದೆ ಬಂದಿರುವವರಿಗೆ ಒಂದು ವಾರದಲ್ಲಿ ಗ್ರಾಮಗಳನ್ನು ವಹಿಸಿಕೊಡಲಾಗುವುದು. ಮನೆಗಳ ನಿರ್ಮಾಣಕ್ಕೆ ಅಗತ್ಯ ಭೂಮಿಯನ್ನು ಸರಕಾರ ನೀಡಲಿದೆ. ನಿರ್ದಿಷ್ಟ ಮಾದರಿಯಲ್ಲಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಉದ್ಯಮಿಗಳು ಕಾರ್ಯ ಆರಂಭಿಸಬಹುದು ಎಂದು ಯಡಿಯೂರಪ್ಪ ವಿವರಿಸಿದರು.
ಸಿಸ್ಕೋ ನೆರವು
ರಾಯಚೂರು ಜಿಲ್ಲೆಯಲ್ಲಿ 50 ಕೋಟಿ ರುಪಾಯಿ ವೆಚ್ಚದಲ್ಲಿ ಒಟ್ಟು ನಾಲ್ಕು ಸಾವಿರ ಮನೆಗಳನ್ನು ನಿರ್ಮಿಸುವ ಒಡಂಬಡಿಕೆ ಪತ್ರಕ್ಕೆ ಸಿಸ್ಕೋ ಸಂಸ್ಥೆಯ ಉಪಾಧ್ಯಕ್ಷ ಅರವಿಂದ ಸೀತಾರಾಮ್ ಮತ್ತು ನೆರೆ ಪರಿಹಾರ ಕಾರ್ಯಕ್ರಮಗಳ ಅನುಷ್ಟಾನದ ನೋಡಲ್ ಅಧಿಕಾರಿ ಜಾಮದಾರ್ ಸಹಿ ಹಾಕಿದರು. ಮನೆ ಕಟ್ಟಿಕೊಡುವ ಹಳ್ಳಿಯನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸುವ ಮತ್ತು ರಾಯಚೂರು ಜಿಲ್ಲೆಯಲ್ಲಿ ಎರಡು ಅತ್ಯಾಧುನಿಕ ಶಾಲೆ ಮತ್ತು ಒಂದು ಆಸ್ಪತ್ರೆಯನ್ನು ನಿರ್ಮಿಸಿಕೊಡಲು ಸಿಸ್ಕೋ ಕಂಪನಿ ನಿರ್ಧರಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications