ಮಹಾರಾಷ್ಟ್ರ, ಗೆದ್ದ 'ಪಂಚ ಕನ್ನಡಿಗರು'

ಮಹಾರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎನ್ನುವ ಬಿಜೆಪಿ-ಶಿವಸೇನೆಯ ಕನಸು ಮತ್ತೊಮ್ಮೆ ನುಚ್ಚುನೂರಾಗಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ಮತ್ತೆ ಪಾರಮ್ಯ ಮರೆದಿದೆ. ಸತತ ಮೂರನೇ ಬಾರಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದ ಗದ್ದುಗೆ ಏರಿದಂತಾಗಿದೆ. ಆದರೆ, ಈ ಸಲದ ವಿಶೇಷವೆಂದರೆ ಮಹಾರಾಷ್ಟ್ರ ವಿಧಾನಸಭೆಗೆ ಐವರು ಕನ್ನಡಿಗರು ಪ್ರವೇಶ ಪಡೆದಿರುವುದು ಸಂತಸದ ಸಂಗತಿ. ಈ ಪೈಕಿ ನಾಲ್ವರು ಉಡುಪಿ ಜಿಲ್ಲೆಯವರಾಗಿದ್ದಾರೆ.
1. ಸುರೇಶ್ ಶೆಟ್ಟಿ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಅಂಧೇರಿ ಪೂರ್ವ
ಮಹಾರಾಷ್ಟ್ರ ಸರಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ಉಡುಪಿ ಜಿಲ್ಲೆಯ ಮಣಿಪಾಲದವರು. 2004ರ ವಿಧಾನಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
2. ಜಗನ್ನಾಥ್ ಶೆಟ್ಟಿ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಸಯಾನ್ ಕೋಲಿವಾಡ
ಉಡುಪಿ ಜಿಲ್ಲೆ ಕಾಪುವಿನವರಾದ ಜಗನ್ನಾಥ್ ಈ ಕ್ಷೇತ್ರದಿಂದ ಸತತ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
3. ಕೃಷ್ಣ ಹೆಗ್ಡೆ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಪೂರ್ವ ವಿಲೆಪಾರ್ಲೆ
ಮುಂಬೈನ ಮಾಜಿ ಮೇಯರ್ ಮತ್ತು ಶಿವಸೇನೆಯ ಮಾಜಿ ಶಾಸಕ ರಮೇಶ್ ಪ್ರಭು ಅವರ ಅಳಿಯರಾಗಿರುವ ಕೃಷ್ಣ ಹೆಗ್ಡೆ, ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನವರು.
4. ಗೋಪಾಲ್ ಶೆಟ್ಟಿ
ಪಕ್ಷ - ಬಿಜೆಪಿ
ಕ್ಷೇತ್ರ - ಬೋರಿವಲಿ
ಈ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗುತ್ತಿರುವ ಇವರು ಉಡುಪಿ ಜಿಲ್ಲೆ ಪಡುಬಿದ್ರೆ ಮೂಲದವರು. ಮುಂಬೈ ಮಹಾನಗರಿಯ ಉಪಮೇಯರ್ ಆಗಿದ್ದ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದವರು.
5. ಗಿಲ್ಬರ್ಟ್ ಜಾನ್ ಮೆಂಡೋನಾ
ಪಕ್ಷ - ಎನ್ಸಿಪಿ
ಕ್ಷೇತ್ರ - ಮೀರಾ ಭಯಂದರ್
ಮಿನಿ ಮಂಗಳೂರು ಎಂದೇ ಖ್ಯಾತಿಯಾಗಿರುವ ಮೀರಾ ರಸ್ತೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ತುಳು, ಕನ್ನಡಿಗ ಮತ್ತು ಕೊಂಕಣಿ ಜನರೊಂದಿಗೆ ಮೆಂಡೋನಾ ಉತ್ತಮ ಸಂಬಂಧಹೊಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications