ಮಹಾರಾಷ್ಟ್ರ, ಗೆದ್ದ 'ಪಂಚ ಕನ್ನಡಿಗರು'

ಮಹಾರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎನ್ನುವ ಬಿಜೆಪಿ-ಶಿವಸೇನೆಯ ಕನಸು ಮತ್ತೊಮ್ಮೆ ನುಚ್ಚುನೂರಾಗಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ಮತ್ತೆ ಪಾರಮ್ಯ ಮರೆದಿದೆ. ಸತತ ಮೂರನೇ ಬಾರಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದ ಗದ್ದುಗೆ ಏರಿದಂತಾಗಿದೆ. ಆದರೆ, ಈ ಸಲದ ವಿಶೇಷವೆಂದರೆ ಮಹಾರಾಷ್ಟ್ರ ವಿಧಾನಸಭೆಗೆ ಐವರು ಕನ್ನಡಿಗರು ಪ್ರವೇಶ ಪಡೆದಿರುವುದು ಸಂತಸದ ಸಂಗತಿ. ಈ ಪೈಕಿ ನಾಲ್ವರು ಉಡುಪಿ ಜಿಲ್ಲೆಯವರಾಗಿದ್ದಾರೆ.
1. ಸುರೇಶ್ ಶೆಟ್ಟಿ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಅಂಧೇರಿ ಪೂರ್ವ
ಮಹಾರಾಷ್ಟ್ರ ಸರಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ಉಡುಪಿ ಜಿಲ್ಲೆಯ ಮಣಿಪಾಲದವರು. 2004ರ ವಿಧಾನಸಭಾ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
2. ಜಗನ್ನಾಥ್ ಶೆಟ್ಟಿ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಸಯಾನ್ ಕೋಲಿವಾಡ
ಉಡುಪಿ ಜಿಲ್ಲೆ ಕಾಪುವಿನವರಾದ ಜಗನ್ನಾಥ್ ಈ ಕ್ಷೇತ್ರದಿಂದ ಸತತ ಎರಡನೇ ಬಾರಿ ಆಯ್ಕೆಯಾಗಿದ್ದಾರೆ.
3. ಕೃಷ್ಣ ಹೆಗ್ಡೆ
ಪಕ್ಷ - ಕಾಂಗ್ರೆಸ್
ಕ್ಷೇತ್ರ - ಪೂರ್ವ ವಿಲೆಪಾರ್ಲೆ
ಮುಂಬೈನ ಮಾಜಿ ಮೇಯರ್ ಮತ್ತು ಶಿವಸೇನೆಯ ಮಾಜಿ ಶಾಸಕ ರಮೇಶ್ ಪ್ರಭು ಅವರ ಅಳಿಯರಾಗಿರುವ ಕೃಷ್ಣ ಹೆಗ್ಡೆ, ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನವರು.
4. ಗೋಪಾಲ್ ಶೆಟ್ಟಿ
ಪಕ್ಷ - ಬಿಜೆಪಿ
ಕ್ಷೇತ್ರ - ಬೋರಿವಲಿ
ಈ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗುತ್ತಿರುವ ಇವರು ಉಡುಪಿ ಜಿಲ್ಲೆ ಪಡುಬಿದ್ರೆ ಮೂಲದವರು. ಮುಂಬೈ ಮಹಾನಗರಿಯ ಉಪಮೇಯರ್ ಆಗಿದ್ದ ಏಕೈಕ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದವರು.
5. ಗಿಲ್ಬರ್ಟ್ ಜಾನ್ ಮೆಂಡೋನಾ
ಪಕ್ಷ - ಎನ್ಸಿಪಿ
ಕ್ಷೇತ್ರ - ಮೀರಾ ಭಯಂದರ್
ಮಿನಿ ಮಂಗಳೂರು ಎಂದೇ ಖ್ಯಾತಿಯಾಗಿರುವ ಮೀರಾ ರಸ್ತೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ತುಳು, ಕನ್ನಡಿಗ ಮತ್ತು ಕೊಂಕಣಿ ಜನರೊಂದಿಗೆ ಮೆಂಡೋನಾ ಉತ್ತಮ ಸಂಬಂಧಹೊಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications