ಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್

ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿದೆ. ಬೆಂಗಳೂರನ್ನು ಹಸಿರು ನಗರವಾಗಿಸಲು ಪರಿಸರಕ್ಕೆ ಪೂರಕವಾದ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ರಸ್ತೆಗಿಳಿಯುವ ಹೊಸ ಗ್ರೀನ್ ಆಟೋಗಳಲ್ಲಿ ಗ್ಯಾಸ್ ಸಿಲಿಂಡರ್ ಅಳವಡಿಕೆ, ಜಿಪಿಎಸ್ ಸಿಸ್ಟಂ, ಸಮವಸ್ತ್ರ ಧರಿಸುವುದು, ಡಿಜಿಟಲ್ ಮೀಟರ್ ಮತ್ತು ಚಾಲನಾ ಪರವಾನಗಿ (ಡಿಎಲ್ ) ಕಡ್ಡಾಯವಾಗಿ ಹೊಂದಿರಲೇಬೇಕು. ಈ ನಿಯಮಗಳನ್ನು ಉಲ್ಲಂಘಿಸುವ ಚಾಲಕರ ಆಟೋಗಳನ್ನು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆಟೋಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಧಿಕೃತ ದಾಖಲಾತಿಗಳಿಲ್ಲದೆ ಕೆಲವು ಆಟೋಗಳು ಸಂಚಾರದಲ್ಲಿ ತೊಡಗಿರುವುದು ತಮ್ಮ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟಲು ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ನಿರ್ಧರಿಸಿರುವುದಾಗಿ ಅಶೋಕ್ ವಿವರಿಸಿದರು.
ಗ್ರೀನ್ ಆಟೋ ಕಡ್ಡಾಯಗೊಳಿಸುವ ಸರಕಾರ ತೀರ್ಮಾನಕ್ಕೆ ಆಟೋ ಚಾಲಕರು ಈ ಹಿಂದೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಆಟೋಗಳಿಗೆ ಹಸಿರು ಬಣ್ಣ ಬಳಿಯಲು ರು.16 ಸಾವಿರದವರೆಗೂ ಖರ್ಚಾಗುತ್ತದೆ ಎಂದು ಚಾಲಕರು ನೋವು ತೋಡಿಕೊಂಡಿದ್ದರು.
ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸುವ ಸಂಬಂಧ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸುವ ಕ್ರಮದಿಂದ ಸರಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications