ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ: ಶೋಭಾ
ಕಳೆದ ಒಂದೂ ಕಾಲು ವರ್ಷದಿಂದ ತಾವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಗ್ರಾಮೀಣಾಭಿವೃದ್ಧಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಬೇಕು ಎಂಬುದು ತಮ್ಮ ಮುಂದಿನ ಗುರಿ. ಮುಂದಿನ ಮೂರು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕಡೆಗೆ ಹೆಚ್ಚು ಹೆಚ್ಚು ಗಮನ ನೀಡಿ ಜನ ಮೆಚ್ಚುವಂತಹ ಕೆಲಸ ಮಾಡಬೇಕೆಂದಿದ್ದೇನೆ. ತಮಗೆ ರಾಜ್ಯಧ್ಯಕ್ಷ ಹುದ್ದೆಯಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದರು.
ಡಿಸೆಂಬರ್ 15ರಿಂದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಪ್ರಭಾವಿ ಸಚಿವೆ ಎಂದೇ ಗುರುತಿಸಿಕೊಂಡಿರುವ ಶೋಭಾ ಕರಂದ್ಲಾಜೆ ಅವರನ್ನು ಮುಂದಿನ ರಾಜ್ಯಾಧ್ಯಕ್ಷರನ್ನಾಗಿಸುವ ಕಸರತ್ತು ಆರಂಭವಾಗಿದೆ ಎಂಬ ಸುದ್ದಿ ಪಕ್ಷದ ವಲದಲ್ಲಿ ಕೇಳಿಬಂದಿತ್ತು. ಆದರೆ ಶೋಭಾ ಕರಂದ್ಲಾಜೆ ಅವರು ಈ ಸುದ್ದಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶೋಭಾಕರಂದ್ಲಾಜೆ ಅವರನ್ನು ಅಧ್ಯಕ್ಷರನ್ನಾಗಿಸಿದರೆ ಮುಂದಿನ ಚುನಾವಣೆ ವೇಳೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಹಂಚುವಲ್ಲಿ ಸುಲಭವಾಗಬಹುದು ಎಂಬ ಲೆಕ್ಕಾಚಾರ ಯಡಿಯೂರಪ್ಪ ಅವರ ಪಾಳಯದಲ್ಲಿ ನಡೆಯುತ್ತಿದೆ ಎನ್ನಲಾಗಿತ್ತ್ತು.
(ದಟ್ಸ್ ಕನ್ನಡ ವಾರ್ತೆ)