ರಂಗಾಯಣ ನಿರ್ದೇಶಕಿ ಜಯಶ್ರೀ ರಾಜೀನಾಮೆ

ಇಂದು ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ರಂಗಾಯಣ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಂಗತಿಯನ್ನು ಅವರು ಸ್ಪಷ್ಟಪಡಿಸಿದ್ದಾರೆ. ರಂಗಾಯಣದ ಕಲಾವಿದರು, ನೌಕರರು ಮತ್ತು ಸಿಬ್ಬಂದಿಗಳ ನಡುವೆ ಒಮ್ಮತವಿಲ್ಲ. ಇದರಿಂದ ಬೇಸರವಾಗಿ ನಿರ್ದೇಶಕಿ ಸ್ಥಾನ ಅನಿವಾರ್ಯವಾಗಿ ರಾಜೀನಾಮೆ ನೀಡುತ್ತಿದ್ದೇನೆ. ರಂಗಾಯಣದ ನಿರ್ದೇಶಕಿಯಾಗಿ ನೇಮಕಗೊಂಡ ನಂತರ ಏನನ್ನಾದರೂ ಸಾಧಿಸುವ ಮಹತ್ವಾಕಾಂಕ್ಷೆ ಹೊಂದಿದ್ದೆ. ಆದರೆ, ಕೆಲ ಕಲಾವಿದರು ತಮ್ಮ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನಿಸಿದರು ಎಂದು ಆರೋಪಿಸಿದರು.
ಇಂತಹ ಅವಮಾನದ ನಡುವೆಯೂ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ. ಬೇರೆಯವರ ಹೇಳಿಕೆಗೆ ಅನುಗುಣವಾಗಿ ಜಯಶ್ರೀ ಬದುಕಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ರಂಗಾಯಣದ ನಿರ್ದೇಶಕಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಕೆಲವು ಷರತ್ತುಗಳನ್ನು ಮುಂದಿಟ್ಟಿದ್ದೆ. ಆದರೆ, ಅವು ರಂಗಭೂಮಿ, ರಂಗಕರ್ಮಿಗಳ ಅಭಿವೃದ್ಧಿಗೆ ಹೊರತು ವೈಯಕ್ತಿಕ ಬಳಿಕೆಗೆ ಅಲ್ಲ ಎಂದರು.
ರಂಗಾಯಣದ ಆವರಣದಲ್ಲಿ ನಡೆದ ತಿರುವಳ್ಳುವರ್ ಪ್ರತಿಮೆ ಅನಾವರಣ ಸಂಬಧದ ಪ್ರಕರಣದಲ್ಲಿ ಕಲಾವಿದರ ಷಡ್ಯಂತ್ರವಿದೆ ಎಂದು ಆರೋಪಿಸಿದ್ದೆ. ಆದರೆ, ಮಾಧ್ಯಮಗಳಲ್ಲಿ ಕಲಾವಿದರ ಕುಚೇಷ್ಟೆ ಎಂದು ತಪ್ಪಾಗಿ ಅರ್ಥೈಸಲಾಗಿದೆ. ಸುಳ್ಳು ಪ್ರಾಮುಖ್ಯತೆ ಪಡೆದುಕೊಂಡಿರುವುದರಿಂದ ಸತ್ಯ ಗೌಪ್ಯವಾಗಿದೆ. ನಾನು ಅಧಿಕಾರ ವಹಿಸಿಕೊಂಡ ನಂತರ 3-4 ಬಾರಿ ಕಲಾವಿದರ ಸಭೆ ನಡೆಸಲಾಗಿದೆ. ಆದರೆ, ಕಲಾವಿದರು, ನೌಕರರು ನಡುವೆ ಒಮ್ಮತ ಮೂಡಲಿಲ್ಲ ಎಂದು ಜಯಶ್ರೀ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications